Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೈದ್ಯರುಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿ : ಶಾಸಕ ಡಾ.ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ, ಜುಲೈ.01 : ಆಸ್ಪತ್ರೆಗೆ ಬರುವ ರೋಗಿಗಳ ಪ್ರಾಣ ಉಳಿಸುವ ಪರಮ ಪವಿತ್ರವಾದ ವೃತ್ತಿಗೆ ಜನರು ಗೌರವ ನೀಡುವಂತೆ ನೀವುಗಳು ನಡೆದುಕೊಳ್ಳಬೇಕೆಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ವೈದ್ಯರುಗಳಿಗೆ ಕರೆ ನೀಡಿದರು.

ಪಟ್ಟಣದ ಕನ್ನಡ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಡಾ.ಬಿಂಧನ್ ಚಂದ್ರರಾಯ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ವೈದ್ಯರನ್ನು ಜನ ದೇವರಂತೆ ಕಾಣುತ್ತಾರೆ. ಪರಮ ಪವಿತ್ರವಾದ ವೃತ್ತಿ ನಿಮ್ಮದು. ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ವೈದ್ಯರುಗಳಾದ ನಿಮ್ಮ ಕೈಯಲ್ಲಿ ಜನರ ಪ್ರಾಣ ಉಳಿಸಬಹುದು. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಿ ಎಂದು ತಾಕೀತು ಮಾಡಿದರು.

ಒತ್ತಡ, ಸಮಸ್ಯೆ, ಪರಿಸ್ಥಿತಿಗನುಗುಣವಾಗಿ ಪ್ರತಿಯೊಬ್ಬರಿಗೂ ಕಾಯಿಲೆ ಬರುವುದು ಸಹಜ. ದಿನನಿತ್ಯವು ವ್ಯಾಯಾಮ, ವಾಯು ವಿಹಾರ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಸೇವೆಗೆ ಮಹತ್ವ ಕೊಡುವ ದಿನ ಇದಾಗಿರುವುದರಿಂದ ವೈದ್ಯರುಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂದು ತಿಳಿಸಿದರು.

ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ವಿನಯ್ ಪಿ.ಸಜ್ಜನ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎನ್.ಶಿವಮೂರ್ತಿ, ಗೌರವಾಧ್ಯಕ್ಷ ಎಸ್.ಮಾರುತೇಶ್, ಡಾ.ಶಿವಲಿಂಗಪ್ಪ, ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದ ಸುಮಿತ್ರಕ್ಕ, ಗಂಗಾಧರಪ್ಪ, ಕವಿ ಸಿದ್ದವ್ವನಹಳ್ಳಿ ವೀರೇಶ್‍ಕುಮಾರ್, ಜೆ.ಎ.ದೇವರಾಜಯ್ಯ, ವೈದ್ಯಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!