Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು : ಮಂಜುನಾಥ್ ಭಾಗವತ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 01 : ಪರಿಸರದ ಬಗ್ಗೆ ಎಲ್ಲರೂ ಕಾಳಜಿಯನ್ನು ವಹಿಸಬೇಕಿದೆ. ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು ಇದೆ. ಇದ್ದಲ್ಲದೆ ಸೂರ್ಯನಿಂದ ಸಿಗುವಂತೆ ಉಚಿತವಾದ ಶಾಖವನ್ನು ಬಳಕೆ ಮಾಡಿಕೊಂಡು ವಿದ್ಯುತ್ ಆಗಿ ಪರಿವರ್ತನೆ ಮಾಡಿಕೊಂಡು ಬಳಕೆ ಮಾಡಿಕೊಂಡು ಮಾರಾಟವನ್ನು ಸಹಾ ಮಾಡಬಹುದಾಗಿದೆ ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಅಧ್ಯಕ್ಷರಾದ ಮಂಜುನಾಥ್ ಭಾಗವತ್ ತಿಳಿಸಿದರು.

ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿನ ಸೆಲ್ಕೋ ಸೋಲಾರ್ ಸಂಸ್ಥೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಮತ್ತು ನವೀಕರಿಸಬಹುದಾದ ಇಂಧನದ ಸಾಧ್ಯತೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ದಿನಮಾನದಲ್ಲಿ ತಾಪಮಾನ ಹೆಚ್ಚಾಗುತ್ತಿದೆ ಇದನ್ನು ಕಡಿಮೆ ಮಾಡಲು ಮರ-ಗಿಡಗಳಿಂದ ಮಾತ್ರ ಸಾಧ್ಯವಿದೆ ಆದರೆ ನಾವುಗಳು ಅಭೀವೃದ್ದಿಯ ನೆಪದಲ್ಲಿ ಮರಗಳನ್ನು ಕಡಿದು ಹಾಕುತ್ತಿದ್ದೇವೆ, ಮತ್ತೇ ಸಸಿಗಳನ್ನು ನೆಡುವ ಕಾರ್ಯವಾಗಬೇಕಿದೆ. ಇದರಿಂದ ಮಾತ್ರ ನಮ್ಮ ತಾಪಮಾನ ಕಡಿಮೆಯಾಗುತ್ತದೆ ಎಂದರು.

ಇತ್ತಿಚಿನ ದಿನಮಾನದಲ್ಲಿ ಎಲ್ಲರು ಸಹಾ ವಿದ್ಯುತ್ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ ಆದರೆ ಉತ್ಪಾದನೆ ಮಾತ್ರ ಕಡಿಮೆ ಇದೆ. ನೀರಿನಿಂದ ಉತ್ಪಾದನೆಯಾಗುವ ವಿದ್ಯುತ್ ಬದಲಾಗಿ ಸೂರ್ಯನಿಂದ ತಯಾರಿಗುವ ವಿದ್ಯುತ್‌ನ್ನು ನಮ್ಮ ಮನೆಯ ಮೇಲೆ ತಯಾರು ಮಾಡುವುದರ ಮೂಲಕ ಬಳಕೆ ಮಾಡಬಹುದಾಗಿದೆ ಇದಕ್ಕೆ ಸಹಕಾರ ನೀಡುವುದ್ದಲ್ಲದೆ ಸಹಾಯಧನವನ್ನು ಸಹಾ ನೀಡುತ್ತಿದೆ, ಮಂದಿನ ದಿನದಲ್ಲಿ ನೀರಿನಿಂದ ತಯಾರುಗುವ ವಿದ್ಯುತ್ ಪ್ರಮಾಣ ಕಡಿಮೆಯಾಗಿ ಎಲ್ಲದಕ್ಕೂ ಸಹಾ ಸೋಲಾರ ಬಳಕೆಯನ್ನು ಮಾಡುವ ದಿನಗಳು ದೂರ ಇಲ್ಲ ಈಗಾಗಲೇ ಸೋಲಾರನ ವಾಹನಗಳು ಒಲೆಗಳು, ವಿವಿಧ ರೀತಿಯ ಯಂತ್ರಗಳು ಸಹಾ ಮಾರುಕಟ್ಟೆಗೆ ಬಂದಿವೆ ಇದರ ಬಳಕೆ ಹೆಚ್ಚಾಗಬೇಕಿದೆ ಎಂದರು.

ಉದ್ಯಮಿ ಅರುಣ್ ಕುಮಾರ್ ಮಾತನಾಡಿ, ಪರಿಸರವನ್ನು ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ಪರಿಸರವನ್ನು ನಿರ್ಲಕ್ಷ ಮಾಡಬಾರದು, ಮನೆಯಲ್ಲಿ ಮಕ್ಕಳಿಗೆ ಚಿಕ್ಕವರಿಂದಾಗಲೇ ಪರಿಸರದ ಬಗ್ಗೆ ತಿಳಿಸುವ ಕಾರ್ಯವನ್ನು ಮಾಡಬೇಕಿದೆ, ಅವರಿಂದಲೇ ಸಸಿಯನ್ನು ನಡೆಸುವುದರ ಮೂಲಕ ಪ್ರತಿ ದಿನ ನೀರನ್ನು ಹಾಕಿಸುವ ಕಾರ್ಯವನ್ನು ಮಾಡಬೇಕಿದೆ, ಇಂದಿನ ದಿನದಲ್ಲಿ ಸೂರ್ಯನ ಬಳಕನ್ನು ವಿದ್ಯುತ್ ಆಗಿ ಪರಿವರ್ತನೆ ಮಾಡಿ ಅದನ್ನು ಬಳಕೆ ಮಾಡುವುದರಿಂದ ನಮಗೆ ಉಳಿತಾಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಜಂಟಿ ಕಾರ್ಯದರ್ಶಿ ಶೈಲಾ ಆರುಣ್ ಕುಮಾರ್, ಉಪಾಧ್ಯಕ್ಷರಾದ ಗುರುಮೂರ್ತಿ, ಹಾಸ್ಯ ಕವಿ ಜಗನ್ನಾಥ್,ತಿಪ್ಪೇಸ್ವಾಮಿ, ಅಜ್ಜಯ್ಯ, ನಳಿನ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!