Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

---Advertisement---

 

ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.

ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.

ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾತನಾಡಿ ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1156 ಎಕರೆ ಪ್ರದೇಶದಲ್ಲಿ 920 ಎಕರೆ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಎಕರೆಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ ರೂ.380 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ರೂ.312 ಕೋಟಿ ಪರಿಹಾರ ನೀಡಲಾಗಿದೆ. ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರುವಾಗಬೇಕಿದೆ. 1156 ಎಕರೆ ಪ್ರದೇಶದಲ್ಲಿ 764 ಎಕರೆ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ, ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1210 ಎಕರೆ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಮೀ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಎಕರೆ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಎಕರೆ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಸ್.ಎಚ್.ಲಮಾಣಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜವನಗೊಂಡನಹಳ್ಳಿ ಹಾಗೂ ಕರಿಯಾಲ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment