ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ, ನಮ್ಮ ಬೋರ್ಡ್ ನಲ್ಲಿ ದುರಾಡಳಿತ ನಡೆದಿದೆ. ಆ ಬೋರ್ಡ್ ಗೆ ನಾನು ಹೆಡ್. ಅಲ್ಲಿನ ವ್ಯವಸ್ಥೆ ಸರಿ ಇಲ್ಲ. ಲಾಸ್ಟ್ ಟೈಂ ಮಂತ್ರಿಗಳು ಸಹ ಹೇಳಿದ್ದರು. ಇದನ್ನು ಸಿಐಡಿಗೆ ಕೊಡಬೇಕು ಅಂತ. ಆದರೆ ಪರಿಶೀಲನೆ ನಡೆಯಲಾರದಂತ ದುರಾಡಳಿತ ನಡೆದಿದೆ. ಮೊನ್ನೆ ನಾವೂ ವಾಲ್ಮೀಕಿ ಬೋರ್ಡ್ ವ್ಯವಸ್ಥೆ ನೋಡಿದ್ದೇವೆ. ಅದಕ್ಕಿಂತಲೂ ಕೆಟ್ಟ ವ್ಯವಸ್ಥೆ ಇಲ್ಲಿ ಆಗುವುದು ಬೇಡ. ಅದಕ್ಕಾಗಿ ಪತ್ರಗಳನ್ನು ಕೊಟ್ಟಿದ್ದೇನೆ. ಆ ವಿಚಾರ ಪ್ರಸ್ತಾಪ ಮಾಡುವ ವಿಚಾರ ಬಂದಾಗ ಮಾತನಾಡುತ್ತೇನೆ. ಅಲ್ಲಿ ಹಲವಾರು ದುರಾಡಳಿತ ನಡೆದಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಬಂದಂತಹ ಸಮಯದಲ್ಲಿ ಈ ವಿಚಾರಗ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಇದೇ ವೇಳೆ ದೆಹಲಿಗೆ ಹೋಗಿದ್ದರ ಬಗ್ಗೆಯೂ ಮಾತನಾಡಿ, ದೆಹಲಿಗೆ ಹೋಗಿದ್ದು ನಿಜ. ಅಸಮಾಧಾನವೇನು ಇಲ್ಲ. ಯಾರ ಮುಂದೆಯೂ ಅಸಮಾಧಾನವನ್ನು ವ್ಯಕ್ತಪಡಿಸಿಲ್ಲ. ಗೌರವ ಇಲ್ಲದ ಕಡೆ ನಾನ್ಯಾಕೆ ಹೋಗಲಿ ಎಂದಿದ್ದಾರೆ. ಜೊತೆಗರ ದುರಾಡಳಿತದ ಬಗ್ಗೆ ಮಾತು ಮುಂದುವರೆಸಿ, ನಮ್ಮ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಹತ್ತು ಹದಿನೈದು ಕಂಪನಿಗಳಿದಾವೆ. ಅದರಲಗಲಿ ಯಾವೆಲ್ಲಾ ಗೋಲ್ ಮಾಲ್ ಆಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.. ತನಿಖೆ ನಡೆಯಲಿ. ನಾನು ಈ ಸಂಬಂಧ ಪತ್ರ ಕಿಟ್ಟು ಎರಡೂವರೆ ತಿಂಗಳಾಯಿತು. ಮುಖ್ಯಮಂತ್ರಿಗೂ ವಿಚಾರ ತಿಳಿಸಿದ್ದೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್