Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

---Advertisement---

 

ಚಿತ್ರದುರ್ಗ. ಜುಲೈ.02:   ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ. ಫ.ಗು. ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಡಾ.ಫ.ಗು.ಹಳಕಟ್ಟಿಯವರು ಹಾಗೂ ಅವರ ತಂಡದ ಮಹಾತ್ಕಾರ್ಯದಿಂದ ಸಾಧ್ಯವಾಗಿದೆ. ವಚನ ಸಾಹಿತ್ಯದ ಮೂಲಪ್ರತಿಗಳಾದ ತಾಳೆಗರಿಗಳನ್ನು, ತಾಮ್ರಶಾಸನಗಳನ್ನು, ವಚನಗಂಟುಗಳನ್ನು ಊರೂರಿಗೆ ತೆರಳಿ, ಮನೆ ಮನೆ ಹುಡುಕಿ, ಸಂಗ್ರಹಿಸಿದ ಡಾ.ಫ.ಗು.ಹಳಕಟ್ಟಿಯವರು ಗ್ರಂಥರೂಪದಲ್ಲಿ ಪ್ರಕಟಿಸಿ, ಮೂರ್ತ ಸ್ವರೂಪ ನೀಡಿ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಸಂತೋಷ ಪವಾರ್ ಉಪನ್ಯಾಸ ನೀಡಿ, ನಮ್ಮ ನಾಡಿನ ಭವ್ಯ ಪರಂಪರೆ ಅನುಪಮ ಸಂಸ್ಕøತಿ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ತಮ್ಮ ತ್ಯಾಗ, ಪರಿಶ್ರಮದಿಂದ ಹೊಸ ಇತಿಹಾಸ ಬರೆದರು. 12ನೇ ಶತಮಾನದ ನಂತರ ವಚನ ಸಾಹಿತ್ಯಕ್ಕೆ ಪುನರ್ ಚೈತನ್ಯವನ್ನು ತಂದುಕೊಟ್ಟ ಕೀರ್ತಿ ಡಾ. ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಬಸವಾದಿ ಶರಣರ ವಚನಗಳನ್ನು ಬೆಳಕಿಗೆ ತಂದವರು, ಒಂದು ವಿಶ್ವವಿದ್ಯಾಲಯ ಸಾಧಿಸಿದಷ್ಟು ಕೆಲಸವನ್ನು ಏಕಾಂಗಿಯಾಗಿ ಸಾಧಿಸಿದ ಹಳಕಟ್ಟಿಯವರು ಒಂದು ವ್ಯಕ್ತಿಯಾಗಿರದೇ ಒಂದು ಶಕ್ತಿಯಾಗಿ ಕಂಡುಬರುತ್ತಾರೆ ಎಂದು ಅಭಿಪ್ರಾಯಪಟ್ಟರು.

ಗಮನ ಸೆಳೆದ ಕವಿಗೋಷ್ಠಿ: ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆ ಅಂಗವಾಗಿ ಡಾ.ಫ.ಗು.ಹಳಕಟ್ಟಿಯವರು ಬದುಕು, ಬರಹ ಹಾಗೂ ವಚನ ಸಾಹಿತ್ಯ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕವಿಗೋಷ್ಠಿ ಗಮನ ಸೆಳೆಯಿತು.

ಎಸ್.ಗಂಗಾಧರಪ್ಪ, ಮೀರಾ ನಾಡಿಗ್, ನಿರ್ಮಲ ಮರಡಿಹಳ್ಳಿ, ಎಂ.ಎಸ್.ಸೌಮ್ಯ, ರಾಜೇಶ್ವರಿ ಶ್ರೀಧರ್, ಜಬೀವುಲ್ಲಾ, ದೀಪಿಕಾ ಬಾಬು, ಕೆ.ಪೂರ್ಣಿಮಾ ಶಾಸ್ತ್ರಿ, ಕ್ಯಾಗಿಗುಂಟೆ  ಶಿವಣ್ಣ, ಬಬ್ಬೂರು ತಿಪ್ಪೀರನಾಯಕ, ಡಾ.ಉಮೇಶ್ ಬಾಬು ಮಠದ್, ಸಿ.ಬಿ.ಶೈಲಾ ಜಯಕುಮಾರ್, ಶಬ್ರಿನಾ ಅಹಮದ್, ಬಹಬೂಬಿ, ಕೆ.ಬಿ.ತಿಪ್ಪಮ್ಮ, ಕಾದಂಬರಿ, ಗಿರೀಶಾಚಾರ, ಭುವನೇಶ್ವರಿ, ಲೀಲಾವತಿ ಯುವರಾಜ, ಸಂಕಲ್ಪ ಸೇರಿದಂತೆ ಸುಮಾರು 21ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡಿದರು.

ಇದೇ ಸಂದರ್ಭದಲ್ಲಿ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಿದ ಕವಿಗಳಿಗೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್‍ನ ಕಾರ್ಯದರ್ಶಿ ಷಣ್ಮುಖಯ್ಯ, ನೇಕಾರರ ಒಕ್ಕೂಟದ ಅಧ್ಯಕ್ಷ ಗೋವಿಂದಪ್ಪ, ನಿವೃತ್ತ ಮುಖ್ಯ ಶಿಕ್ಷಕ ಹುರುಳಿ ಬಸವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...