Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ರಕ್ಷಣೆ ನಿತ್ಯದ ಕಾಯಕವಾಗಬೇಕು : ಉಮೇಶ ಕಾರಜೋಳ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜುಲೈ 03 : ನಿಸರ್ಗ ಸಹ ತಾಯಿ ಸ್ವರೂಪಿ. ಹೀಗಾಗಿ ಪರಿಸರ ರಕ್ಷಣೆ ಆದ್ಯ ಕರ್ತವ್ಯ, ನಿತ್ಯದ ಕಾಯಕವಾಗಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಉಮೇಶ ಕಾರಜೋಳ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಆಕಾಶವಾಣಿಯಲ್ಲಿ ಪ್ರಸಾರವಾಗುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪರಿಸರ ಕಾಳಜಿ ಕುರಿತು ಹೇಳಿದ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ವಾರ್ಡ್ ನಂ. 31 ರ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್ ಕಾಲೋನಿ ಕ್ಷೇಮಾಬಿವೃದ್ಧಿ ಸಂಘದವತಿಯಿಂದ ಸಸಿಗಳನ್ನು ನೆಡುವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹೆತ್ತ ತಾಯಿ ಋಣ ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ, ಹೆತ್ತ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಮೂಲಕ ನಮಗೆ ಉಸಿರು ನೀಡಿರುವ ಪರಿಸರ ರಕ್ಷಿಸುವ ಪವಿತ್ರ ಕಾಯಕ ಕೈಗೊಳ್ಳುವಂತೆ ಪ್ರಧಾನಿ ಮೋದಿಜಿ ಕರೆ ನೀಡಿದ್ದಾರೆ. ನಿಸರ್ಗ ಸಹ ತಾಯಿ ಸ್ವರೂಪಿ. ಹೀಗಾಗಿ ಪರಿಸರ ರಕ್ಷಣೆ ಆದ್ಯ ಕರ್ತವ್ಯ, ನಿತ್ಯದ ಕಾಯಕವಾಗಬೇಕು ಎಂದರು.

ಕೇವಲ ಸಸಿ ನೆಟ್ಟರೆ ಸಾಲದು, ಅವುಗಳನ್ನು ಪೋಷಿಸುವುದು ಅಷ್ಟೇ ಮುಖ್ಯ, ಮಾನವನ ಪರಿಸರ ವಿರೋಧಿ ಚಟುವಟಿಕೆಗಳಿಂದ ಪರಿಸರ ಹಾನಿಯಾಗುತ್ತಿದೆ, ಇದರಿಂದ ನಿರಫರಾಧಿ ಉಳಿದ ಜೀವಿಗಳಿಗೂ ತೊಂದರೆಯಾಗುತ್ತಿದೆ. ಸಸಿ ನೆಡುವುದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಗಿಡಗಳಿಗೆ ನೀರುಣಿಸುವುದು, ಎಲೆಗಳಿಗೆ ರೋಗ ತಾಕಿದೆಯೇ ಎಂದು ಪರೀಕ್ಷಿಸುವುದು, ಇತರರಿಗೂ ಸಸಿ ನೆಡಿ ಎಂದು ಹೇಳುವುದು ಸಹ ಪರಿಸರ ರಕ್ಷಣೆ ಭಾಗವೇ ಎಂದರು.

ಈ ಸಂದರ್ಭದಲ್ಲಿ ಡಾ.ರವಿಪ್ರಕಾಶ್ ರೆಡ್ಡಿ, ರಮೇಶ್, ಪಾಂಡುರಂಗ ರೆಡ್ಡಿ, ಬಿ. ಎಂ ಪಾಲಯ್ಯ, ತಿಮ್ಮೇಶ. ಆದರ್ಶ. ತಿರುಮಲಕ್ಷಿ,  ಅನಿತಾ, ಸುಧಾ, ಸುಮಿತ್ರಮ್ಮ ಹಾಗೂ ಕಾಲೋನಿಯ ನಿವಾಸಿಗಳು ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಜು.10 ಕೊನೆಯ ದಿನ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಚಿತ್ರದುರ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ

ಮನೆಗೆ ಮಗನಂತಿದ್ದ.. ಮಕ್ಕಳಿಲ್ಲದ ಕೊರಗು ಅವನಿಗೆ ಕಾಡುತ್ತಿತ್ತು : ಮೃತ ಅಳಿಯನ ಬಗ್ಗೆ ಬಿಸಿ ಪಾಟೀಲ್ ಹೇಳಿದ್ದೇನು..?

ದಾವಣಗೆರೆ: ಇಂದು ಮಾಜಿ ಸಚಿವ ಬಿ.ಸಿ.ಪಾಟೀಲ್ 40 ವರ್ಷದ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಅಳಿಯನ ಬಗ್ಗೆ ಮಾತನಾಡಿರುವ ಬಿ.ಸಿ.ಪಾಟೀಲ್, ಮನೆಗೆ ಮಗನಂತಿದ್ದ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದ ಎಂದಿದ್ದಾರೆ.

ಚಿತ್ರದುರ್ಗ | 8 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು…!

ಸುದ್ದಿಒನ್, ಚಿತ್ರದುರ್ಗ, ಜುಲೈ.08 : ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 8 ಲಕ್ಷ ರೂಪಾಯಿ ಮೌಲ್ಯದ 80 ಮೊಬೈಲ್ ಫೋನ್​ಗಳನ್ನು ಇಂದು (ಜುಲೈ. 08) ಪ್ರಾಪರ್ಟಿ ರಿಟರ್ನ್‌ ಪರೇಡ್​ನಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಗರದ ಜಿಲ್ಲಾ

error: Content is protected !!