Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

---Advertisement---

ಚಿತ್ರದುರ್ಗ. ಜುಲೈ.03:   ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ.

ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ಒದಗಿಸುತ್ತಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ ದಾಖಲೆಗಳನ್ನು ಪರಿಶೀಲಿಸಿದಾಗ ಬಹಳ ಕಡಿಮೆ ಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡದ ಎಸ್.ಟಿ.ಜನಾಂಗದವರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ಪಂಗಡದವರು ವಾಸಿಸುತ್ತಿರುವುದರಿಂದ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಸರ್ಕಾರಿ ಸೌಲಭ್ಯ ಪಡೆಯಬಹುದು ಎಂದು ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment