Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಟ್ಟಿ ಭಾಗ್ಯ ಕೊಡಲಿಕ್ಕೆ ವಾಲ್ಮೀಕಿ ನಿಗಮದ ದುಡ್ಡೇ ಬೇಕಿತ್ತಾ ? ಸಿಎಂ ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ, ಜುಲೈ. 03 :  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಬಿಟ್ಟಿಭಾಗ್ಯಗಳನ್ನು ಕೊಟ್ಟು ಖಜಾನೆ ಖಾಲಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರೇ ಬಿಟ್ಟಿ ಭಾಗ್ಯ ಕೊಡಲಿಕ್ಕೆ ವಾಲ್ಮೀಕಿ ಜನಗಳ ದುಡ್ಡೇ ಬೇಕಾ ನಿಮಗೆ? ಎಂದು ಮೊಳಕಾಲ್ಮೂರು  ಮಾಜಿ ಶಾಸಕ ತಿಪ್ಪೇಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು,
ಕಾಂಗ್ರೆಸ್ ಸರ್ಕಾರ 187 ಕೋಟಿ ವಾಲ್ಮೀಕಿ ನಿಗಮದಿಂದ ಸಿದ್ದರಾಮಯ್ಯನವರ ಸರ್ಕಾರ ಕೊಳ್ಳೆ ಹೊಡೆದಿದೆ ,ಸ್ವಾಮಿ ಸಿದ್ರಾಮಯ್ಯನವರೇ ವಾಲ್ಮೀಕಿ ಸಮುದಾಯ ಹಾಗೂ ಪರಿಶಿಷ್ಟ ಜಾತಿ ಸಮುದಾಯದಿಂದ ಈ ಹಣವನ್ನು ದುರುಪಯೋಗ ಮಾಡಿಕೊಂಡು ಬಿಟ್ಟಿ ಭಾಗ್ಯಕ್ಕೆ ಹಣ ಬಳಕೆ ಮಾಡಿಕೊಂಡಿರುವುದು ಖಂಡನೀಯ.

ಇದು ಅಲ್ಲದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದ ಸಮುದಯಕ್ಕೆ ಮೀಸಲಿಟ್ಟ  25,000 ಸಾವಿರ ಕೋಟಿ  ಹಣವನ್ನ ಕಾಂಗ್ರೆಸ್ ಸರ್ಕಾರ  ದುರ್ಬಳಕೆ ಮಾಡಿಕೊಂಡಿದೆ ಇತ್ತ ಜನಸಾಮಾನ್ಯರ  ಹಾಲಿನ ಧರ ನೀರಿನ ಧರ ಪೆಟ್ರೋಲ್ ಡೀಸೆಲ್ ಕಂದಾಯ ತೆರಿಗೆ ದಿನಸಿ ವಸ್ತುಗಳ ಹೆಚ್ಚಿಸಿ ಸಾಮಾನ್ಯ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದ್ದಾರೆ.

ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿ ಹಣ ಗಳಿಕೆ ಮಾಡಿಕೊಳ್ಳುತ್ತಿದ್ದಾರೆ.

ನಮ್ಮ ವಾಲ್ಮೀಕಿ ಸಮುದಾಯ ಹಾಗೂ ಏಕೆ ಸಮುದಾಯಗಳು ಕಾಂಗ್ರೆಸ್ ಸರ್ಕಾರಕ್ಕೆ ವೋಟ ಹಾಕಿಲ್ಲವಾ ಹಾಗಾದರೆ ನಮ್ಮ ಹಣವನ್ನು ಯಾಕೆ‌ ದುರ್ಬಳಕೆ ಮಾಡಿಕೊಂಡಿದ್ದೀರಿ ಇದಕ್ಕೆ ಮುಖ್ಯಮಂತ್ರಿಗಳೇ ಹೊಣೆಗಾರಿಕೆಯಾಗಬೇಕು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಅಲ್ಲದೆ ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು ರಾಜೀನಾಮೆ ಕೋಡಬೇಕು ಇಲ್ಲವಾದರೆ ಉಗ್ರ ಪ್ರತಿಭಟನೆಗೆ ನಾವು ಮುಂದಾಗುತ್ತೇವೆ ಎಂದು ತಿಳಿಸಿದರು .

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...