Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂಡಮಾರುತಕ್ಕೆ ಸಿಲುಕಿದ್ದ ಟೀಂ ಇಂಡಿಯಾ ಕಡೆಗೂ ತವರಿಗೆ ಪ್ರಯಾಣ : ನಾಳೆ ಮುಂಬೈನಲ್ಲಿ ಟ್ರೋಫಿಯೊಂದಿಗೆ ರೋಡ್ ಶೋ

---Advertisement---

ನವದೆಹಲಿ: ಹಲವು ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ. ಈ ಸಂತಸವನ್ನು ಇಡೀ ದೇಶವೇ ಸಂಭ್ರಮಿಸಿದೆ, ಟೀಂ ಇಂಡಿಯಾ ಆಟಗಾರರನ್ನು ಕೊಂಡಾಡಿದ್ದಾರೆ. ಗೆದ್ದ ಮರುದಿನವೇ ಈ ಯಶಸ್ಸನ್ನು ಸಂಭ್ರಮಿಸಬೇಕೆಂದುಕೊಂಡಿದ್ದ ಕ್ರಿಕೆಟ್ ಪ್ರೇಮಿಗಳು ಅದು ಸಾಧ್ಯವಾಗಲಿಲ್ಲ. ಚಂಡಮಾರುತದಿಂದಾಗಿ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿಲ್ಲ. ಬೆರಿಲ್ ಚಂಡಮಾರುತಕ್ಕೆ ಸಿಲುಕಿ ಟೀಂ ಇಂಡಿಯಾ ಆಟಗಾರರು ಬಾರ್ಬಡಾಸ್ ನಲ್ಲಯೇ ಲಾಕ್ ಆಗಿ ಬಿಟ್ಟರು. ಆದರೆ ಇದೀಗ ವಿಶೇಷ ವಿಮಾನದ ಮೂಲಕ ಭಾರತದ ತಂಡದ ನಾಯಕರು ತವರಿಗೆ ಬರುತ್ತಿದ್ದಾರೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ಚಾರ್ಟರ್ ಫ್ಲೈಟ್ ಮೂಲಕ ಟೀಂ ಇಂಡಿಯಾ ಆಟಗಾರರು ನಾಳೆ ದೆಹಲಿಗೆ ಬಂದಿಳಿಯಲಿದ್ದಾರೆ. ನಾಳೆ ಅಂದ್ರೆ ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ತೆರೆದ ಬಸ್ ನಲ್ಲಿ ಭಾರತ ತಂಡವನ್ನು ಟ್ರೋಪಿಯೊಂದಿಗೆ ಮೆರವಣಿಗೆ ಮಾಡಲಿದ್ದಾರೆ. ಮೆರವಣಿಗೆ ಮೂಲಕ ವಾಂಖೇಡೆ ಕ್ರೀಡಾಂಗಣಕ್ಕೆ ಕರೆದೊಯ್ಯುತ್ತಾರೆ. ಈ ರೋಡ್ ಶೋನಲ್ಲಿ ಭಾರತದ ಎಲ್ಲಾ ಆಟಗಾರರು ಟ್ರೋಫಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ಬಿಸಿಸಿಐ ಸೂಚನೆ ನೀಡಿದೆ.

ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು 125 ಕೋಟಿ ಬಹುಮಾನವನ್ನು ಘೋಷಣೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿಯೇ ಬಹುಮಾನದ ಹಣವನ್ನು ನೀಡಲಿದ್ದಾರೆ. ಈ ವಿಜಯೋತ್ಸವ ಆಚರಣೆ ಮಾಡಲು ಫ್ಯಾನ್ಸ್ ಗೂ ಕರೆ ನೀಡಲಾಗಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಜೈ ಶಾ ಕರೆ ನೀಡಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಹಾಜರಾಗುವ ಮೂಲಕ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿಶ್ವಕಪ್ ಗೆದ್ದಿರುವ ಸಂಭ್ರಮದಲ್ಲಿ ಭಾಗಿಯಾಗಲು ಫ್ಯಾನ್ಸ್ ಕೂಡ ಕಾತುರದಿಂದ ಕಾಯುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...