Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಮತ್ತೆ ಜೈಲಿಗೆ :ಜು.18ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ..!

Facebook
Twitter
Telegram
WhatsApp

ನಟ ದರ್ಶನ್ ಅವರಿಗೆ ಮತ್ತೆ ಜೈಲುವಾಸ ವಿಸ್ತರಣೆಯಾಗಿದೆ. ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಕೊಲೆ ಕೇಸಿನಲ್ಲಿ ಬಂಧನವಾಗಿದ್ದ ದರ್ಶನ್ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಿದ್ದರು‌. ಕೋರ್ಟ್ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಇನ್ನು ಹದಿನಾಲ್ಕು ದಿನಗಳ ಕಾಲ ದರ್ಶನ್ ಮತ್ತು ಸಂಗಡಿಗರು ಜೈಲಿನಲ್ಲೇ ಇರಬೇಕಾಗಿದೆ.

ಕಳೆದ ಬಾರಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಅವಧಿ ಇಂದಿಗೆ ಮುಕ್ತಾಯವಾದ ಬೆನ್ನಲ್ಲೇ ಇಂದು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ತುಮಕೂರು ಹಾಗೂ ಪರಪ್ಪನ ಅಗ್ರಹಾರದಲ್ಲಿರುವ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇನ್ನು ಪವಿತ್ರಾ ಗೌಡ ಅವರನ್ನು ಪ್ರತ್ಯೇಕವಾಗಿ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಮುಂದಿನ14 ದಿನಗಳ ಕಾಲ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಶ್ಲೀಲ ಮೆಸೇಜ್ ಹಾಗೂ ಫೋಟೋ ಕಳುಹಿಸುತ್ತಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಎತ್ತಾಕಿಕೊಂಡು ಬಂದು ದರ್ಶನ್ ಅಂಡ್ ಗ್ಯಾಂಗ್ ಹೊಡೆದಿದ್ದಾರೆ. ಅದು ಕೊಲೆಯ ಹಂತಕ್ಕೆ ತಲುಪಿದ್ದು ಈಗ ಹದಿನೇಳು ಮಂದಿ ಜೈಲುವಾಸದಲ್ಲಿದ್ದಾರೆ. ದರ್ಶನ್ ಅವರನ್ನು ಬಿಡಿಸಲು ಪತ್ನಿ ಪ್ರಯತ್ನ ಪಡುತ್ತಿದ್ದಾರೆ. ಪವಿತ್ರಾ ಗೌಡರನ್ನು ನೋಡಲು ಅಪ್ಪ, ಅಮ್ಮ, ತಮ್ಮನು ಬರುತ್ತಿದ್ದಾರೆ. ಪವಿತ್ರಾ ಅವರನ್ನು ಕೂಡ ಪೋಷಕರು ಬಿಡಿಸಬಹುದು. ಆದರೆ ಇಲ್ಲಿ ಮಧ್ಯದಲ್ಲಿ ತಗಲಾಕಿಕೊಂಡ ಚಿತ್ರದುರ್ಗದ ಹುಡುಗರ ಗತಿ ಏನು ಎಂಬುದೇ ಕುಟುಂಬಸ್ಥರ ಪ್ರಶ್ನೆಯಾಗಿದೆ. ಈಗಾಗಲೇA5 ಆರೋಪಿ ನಂದೀಶ್ ಅವರ ಅಕ್ಕ ಕಣ್ಣೀರು ಹಾಕುತ್ತಾ ಸಮಸ್ಯೆ ಹೇಳಿಕೊಂಡಿದ್ದಾರೆ. ಅವರಿಗೆ ವಕೀಲರನ್ನು ಸಹ ನೇಮಿಸಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

error: Content is protected !!