Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

Facebook
Twitter
Telegram
WhatsApp

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ.

ಮುಖ್ಯವಾಗಿ ರೂ.11.50 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಕೋಟೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಭಾರತೀಯ ಪುರಾತತ್ವ ಇಲಾಖೆ ಅನುಮತಿಯನ್ನು ಶೀಘ್ರ ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಗೆ ಪ್ರತಿ ತಿಂಗಳು 35 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರ ಅಡಿ, ರೂ.75 ಲಕ್ಷದಲ್ಲಿ ಮಕ್ಕಳ ಉದ್ಯಾನವನ, ರೂ.1 ಕೋಟಿ ವೆಚ್ಚದಲ್ಲಿ ಅಕ್ಕ ತಂಗಿಯರ ಹೊಂಡದ ಬಳಿ ನೀರಿನ ಕಾರಂಜಿಗಳನ್ನು ನಿರ್ಮಿಸಲಾಗುವುದು. ಇದರ ಜೊತೆಗೆ ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.
ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.

ಕೆ.ಎಂ.ಇ.ಆರ್.ಸಿ ಅನುದಾನದ ಅಡಿಯಲ್ಲಿಯೇ ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರದಲ್ಲಿ ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು. ಹೊಳಲ್ಕೆರೆ ತಾಲ್ಲೂಕಿನ ದೊಡ್ಡಹೊಟ್ಟೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ, ಬೆಟ್ಟದಲ್ಲಿ ಕಲ್ಯಾಣಿಯ ಪುನರುಜ್ಜೀವನ, ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು.

ವಿ.ವಿ.ಸಾಗರ ಜಲಾಶಯದ ಹಿನ್ನೀರಿನಲ್ಲಿ ಸಾಹಸಮಯ ಜಲಕ್ರೀಡೆ ಆರಂಭಿಸಲು ಸಹ ಯೋಜನೆ ರೂಪಿಸಲಾಗಿದೆ. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ವಾಣಿ ವಿಲಾಸ ಸಾಗರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ, ಇದರೊಂದಿಗೆ ಚಂದ್ರವಳ್ಳಿ ಕೆರೆಯಲ್ಲಿ ಜಲಕ್ರೀಡೆ ಹಾಗೂ ದೋಣಿ ವಿಹಾರಕ್ಕೂ ಯೋಜನೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ 2015 ಅಡಿ ಜಿಲ್ಲೆಯ ಪ್ರಮುಖ ಹೋಟೆಲ್‍ಗಳ ನೊಂದಣಿ ಕಡ್ಡಾಯವಾಗಿ ಮಾಡಬೇಕು. ಇದರಿಂದ ಜಿಲ್ಲೆಗೆ ಭೇಟಿ ನೀಡಿದ ಹೊರ ದೇಶ ಹಾಗೂ ಹೊರ ರಾಜ್ಯದ ಪ್ರವಾಸಿಗರ ಮಾಹಿತಿ ಲಭ್ಯವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಯಾತ್ರಿ ನಿವಾಸಗಳು ಸಾರ್ವಜನಿಕರ ಬಳಕೆ ಒದಗುವಂತಾಗಬೇಕು. ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ, ನಿರ್ವಹಣೆ ಜವಬ್ದಾರಿ ವಹಿಸುವಂತೆ ಹೇಳಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಕಿರುಹೊತ್ತಿಗೆ ಮುದ್ರಿಸಬೇಕು. ಇದರಲ್ಲಿ ಕೇಂದ್ರ, ರಾಜ್ಯ ಹಾಗೂ ಪ್ರವಾಸೊದ್ಯಮ ಇಲಾಖೆಯಿಂದ ನಿರ್ವಹಿಸುತ್ತಿರುವ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಇರಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರರುಗಳಾದ ಡಾ.ನಾಗವೇಣಿ, ಪಾತೀಮ ಬಿಬಿ, ತಿರುಪತಿ ಪಾಟೀಲ್, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಶಿಕುಮಾರ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!