Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕೆಂಡಾಮಂಡಲ

---Advertisement---

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ ಈ ಜನಾತಾ ದರ್ಶನಕ್ಕೆ ಡಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಯಾವ ಅಧಿಕಾರಿಯೂ ಹಾಜರಾಗಿರಲಿಲ್ಲ. ಎಲ್ಲರೂ ಗೈರಾಗಿದ್ದರು. ಹೀಗಾಗಿ ದ್ವೇಷದ ರಾಜಕಾರಣ ನಡೀತಾ ಇದ್ಯಾ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಎಲ್ಲಾ ಅಧಿಕಾರಿಗಳಿಗೆ ಮೌಖಿಕ ಸಂದೇಶ ಹೋಗಿದೆ ಎನ್ನಲಾಗಿದೆ. ಕುಮಾರಸ್ವಾಮಿ ನಡೆಸುತ್ತಿರುವ ಜನತಾ ದರ್ಶನ ಸರ್ಕಾರದ ಕಾರ್ಯಕ್ರಮವಲ್ಲ. ಕೇಂದ್ರ ಸಚಿವರು ಜನಾತ ದರ್ಶನ ನಡೆಸುವುದಕ್ಕೆ ಸರ್ಕಾರದಲ್ಲಿ ಅವಕಾಶವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಗಳು ಮೌಖಿಕ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳು ಗೈರಾಗಿದ್ದಕ್ಕೆ ತರಾಟೆ ತೆಗೆದುಕೊಂಡ ಕುಮಾರಸ್ವಾಮಿ, ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವೂ ಅಧಿಕಾರಿಗಳನ್ನು ದೂರವಿಡಬಹುದು. ಆದರೆ ನನ್ನಿಂದ ಜನರನ್ನು ದೂರ ಇಡಲು ಸಾಧ್ಯವಿಲ್ಲ‌ ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ. ಅಧಿಕಾರಿಗಳನ್ನು ದೂಷಿಸಲ್ಲ, ಸರ್ಕಾರ ಸಣ್ಣತನ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮೂಡಾ ಸೈಟ್ ಗಳನ್ನು ವಾಪಾಸ್ ತೆಗೆದುಕೊಂಡು ಜಮೀನಿಗೆ ಮಾರುಕಟ್ಟೆ ಬೆಲೆಯಲ್ಲಿ 62 ಕೋಟಿ ಕೊಡಲಿ ಎಂಬ ಸಿಎಂ ಮಾತಿಗೆ ಪ್ರತಿಕ್ರಿಯೆ ನೀಡಿದ್ದು, ಮೂಡಾ 62 ಕೋಟಿ ಕೊಡಲಿ ಅಂತ ಅಷ್ಟು ಸುಲಭವಾಗಿ ಹೇಳುತ್ತಾರೆ. ರೈತರ ಜಮೀನುಗಳನ್ನ ಹಲವು ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಂಡಿರುವ ಸರ್ಕಾರ ಮಾರುಕಟ್ಟೆ ಬೆಲೆಯನ್ನೇ ಕೊಟ್ಟಿದೆಯಾ..? ಅಮಾಯಕ ರೈತರು ತಮ್ಮ ಜಮೀನಿನ ಪರಿಹಾರ ಪಡೆಯಲು ಕೋರ್ಟು, ಕಚೇರಿ ಅಲೆದಾಡುತ್ತಾ ಚಪ್ಪಲಿ ಸವೆಸುತ್ತಾರೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment