Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕೆಂಡಾಮಂಡಲ

Facebook
Twitter
Telegram
WhatsApp

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ ಈ ಜನಾತಾ ದರ್ಶನಕ್ಕೆ ಡಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಯಾವ ಅಧಿಕಾರಿಯೂ ಹಾಜರಾಗಿರಲಿಲ್ಲ. ಎಲ್ಲರೂ ಗೈರಾಗಿದ್ದರು. ಹೀಗಾಗಿ ದ್ವೇಷದ ರಾಜಕಾರಣ ನಡೀತಾ ಇದ್ಯಾ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಎಲ್ಲಾ ಅಧಿಕಾರಿಗಳಿಗೆ ಮೌಖಿಕ ಸಂದೇಶ ಹೋಗಿದೆ ಎನ್ನಲಾಗಿದೆ. ಕುಮಾರಸ್ವಾಮಿ ನಡೆಸುತ್ತಿರುವ ಜನತಾ ದರ್ಶನ ಸರ್ಕಾರದ ಕಾರ್ಯಕ್ರಮವಲ್ಲ. ಕೇಂದ್ರ ಸಚಿವರು ಜನಾತ ದರ್ಶನ ನಡೆಸುವುದಕ್ಕೆ ಸರ್ಕಾರದಲ್ಲಿ ಅವಕಾಶವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಗಳು ಮೌಖಿಕ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳು ಗೈರಾಗಿದ್ದಕ್ಕೆ ತರಾಟೆ ತೆಗೆದುಕೊಂಡ ಕುಮಾರಸ್ವಾಮಿ, ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವೂ ಅಧಿಕಾರಿಗಳನ್ನು ದೂರವಿಡಬಹುದು. ಆದರೆ ನನ್ನಿಂದ ಜನರನ್ನು ದೂರ ಇಡಲು ಸಾಧ್ಯವಿಲ್ಲ‌ ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ. ಅಧಿಕಾರಿಗಳನ್ನು ದೂಷಿಸಲ್ಲ, ಸರ್ಕಾರ ಸಣ್ಣತನ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮೂಡಾ ಸೈಟ್ ಗಳನ್ನು ವಾಪಾಸ್ ತೆಗೆದುಕೊಂಡು ಜಮೀನಿಗೆ ಮಾರುಕಟ್ಟೆ ಬೆಲೆಯಲ್ಲಿ 62 ಕೋಟಿ ಕೊಡಲಿ ಎಂಬ ಸಿಎಂ ಮಾತಿಗೆ ಪ್ರತಿಕ್ರಿಯೆ ನೀಡಿದ್ದು, ಮೂಡಾ 62 ಕೋಟಿ ಕೊಡಲಿ ಅಂತ ಅಷ್ಟು ಸುಲಭವಾಗಿ ಹೇಳುತ್ತಾರೆ. ರೈತರ ಜಮೀನುಗಳನ್ನ ಹಲವು ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಂಡಿರುವ ಸರ್ಕಾರ ಮಾರುಕಟ್ಟೆ ಬೆಲೆಯನ್ನೇ ಕೊಟ್ಟಿದೆಯಾ..? ಅಮಾಯಕ ರೈತರು ತಮ್ಮ ಜಮೀನಿನ ಪರಿಹಾರ ಪಡೆಯಲು ಕೋರ್ಟು, ಕಚೇರಿ ಅಲೆದಾಡುತ್ತಾ ಚಪ್ಪಲಿ ಸವೆಸುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್, ಪ್ರಪಂಚವೇನು ಅಂಗಡಿಯಲ್ಲಿ ಸಿಗುವ ಚಡ್ಡಿಯಾ..? ಜಗದೀಶ್ ಗೆ ಧನರಾಜ್ ಟಾಂಗ್..!

ಬಿಗ್ ಬಾಸ್ ಸೀಸನ್ 11 ಶುರುವಾಗಿ ವಾರವಾಗಿದೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಮೊದಲ ವಾರವೇ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಟಾಸ್ಕ್ ನಲ್ಲಿ ಸರಿಯಾಗಿ ಆಡದಿರುವವರೋ, ಜನಗಳಿಂದ ಮತಗಳನ್ನು ಪಡೆಯದೆ ಇರುವವರೋ ಹೊರಗೆ ಬರಲಿದ್ದಾರೆ.

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

error: Content is protected !!