Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಚನಕಮ್ಮಟ ರಾಜ್ಯಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ | ವಚನ ಸಾಹಿತ್ಯದಿಂದ ಸುಖ ಶಾಂತಿ ನೆಮ್ಮದಿ : ಬಸವಪ್ರಭು ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜು. 06 : ಚಿಕ್ಕಮಕ್ಕಳ ಮೇಲೆ ನೀತಿ ಪಾಠಗಳು ಬಹಳಷ್ಟು ಪರಿಣಾಮ ಬೀರುವುದರಿಂದ ಪೋಷಕರಾಗಲಿ, ಶಿಕ್ಷಕರಾಗಲಿ ಕಷ್ಟಪಟ್ಟಾದರೂ ಸರಿ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳತ್ತ ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವತ್ತ ಗಮನಹರಿಸಬೇಕಿದೆ ಎಂದು ಶಿರಸಂಗಿ ಮಠದ ಶ್ರೀ ಬಸವಮಹಾಂತ ಸ್ವಾಮಿಗಳು ಕರೆ ನೀಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ 2021-22 ಹಾಗೂ 2022-23ನೇ ಸಾಲಿನ ರಾಜ್ಯಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.


ಬಸವಾದಿ ಶಿವಶರಣರ ವಚನಗಳಲ್ಲಿ ಜೀವನ ಮೌಲ್ಯಗಳಿವೆ. ಅವುಗಳು ಚಿಕ್ಕವಯಸ್ಸಿನ ಮಕ್ಕಳ ಮನಸ್ಸಿಗೆ ಹೋದರೆ ಸಾಧ್ಯವಾದಷ್ಟು ಆ ವಚನಗಳ ಮೂಲಕ ಬದುಕನ್ನು ಸಾಗಿಸುವ ಪ್ರಯತ್ನ ಮಾಡುತ್ತದೆ. ಮೊಬೈಲ್ ಈಗ ವಿಶ್ವವ್ಯಾಪಿ ಹಾಗೆಯೇ ಮಕ್ಕಳಿಂದ ಮುದುಕರವರೆಗೂ ಅನಿವಾರ್ಯ ಎನ್ನುವಂತಾಗಿದೆ. ಆದ್ದರಿಂದ ಅದನ್ನು ಯಾವ ಕೆಲಸಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಸಿಕೊಂಡಲ್ಲಿ ಅದು ನಮಗೆ ಉಪಯೋಗದ ವಸ್ತುವಾಗುತ್ತದೆ. ಅತಿಯಾಗಿ ಬಳಸಿದಲ್ಲಿ ಅದು ಶಾಪವೂ ಆಗಬಹುದು. ಇವುಗಳಿಂದ ಹೊರಬರಲು ವಚನಮಾರ್ಗ ಹಿಡಿಯುವುದು ಹಿಡಿಸುವುದು ತುರ್ತು ಅಗತ್ಯವಿದೆ ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯರು, ವಚನಕಮ್ಮಟ ಪರೀಕ್ಷೆಯ ಈ ಮೊದಲು ನಿರ್ದೇಶಕರೂ ಆಗಿದ್ದ ಪ್ರೊ. ಸಿ.ಎಂ. ಚಂದ್ರಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಳೆದ 24 ವರ್ಷಗಳ ಹಿಂದೆ ವಚನ ಕಮ್ಮಟ ಪರೀಕ್ಷೆಗಳ ಮೂಲಕ ನಾಡಿನಾದ್ಯಂತ ಬಸವಾದಿ ಶಿವಶರಣರ ವಚನ ಸಾಹಿತ್ಯದ ಅರಿವು ಮೂಡಿಸುವ ಕೆಲಸ ಆರಂಭವಾಯಿತು.


ವಚನಗಳ ಮೂಲಕ ಪ್ರೇರಣೆಗೊಂಡಂತಹ ಲೇಖಕರು, ಸಾಹಿತಿಗಳು, ಕವಿಗಳು ಮೌಲಿಕ ಸಾಹಿತ್ಯ ಕೃತಿಗಳನ್ನು ನೀಡಿರುವುದನ್ನು ವಚನಕಮ್ಮಟ ಪರೀಕ್ಷೆಗಳಿಗೆ ಪಠ್ಯವಾಗಿ ಇಡಲಾಗಿದೆ. ಇಂತಹ ಪರೀಕ್ಷೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಉತ್ತಮ ರೀತಿಯ ಸಹಕಾರ ದೊರೆತು ಪರೀಕ್ಷೆ ತೆಗೆದುಕೊಳ್ಳುವವರ ಸಂಖ್ಯೆ ಲಕ್ಷಕ್ಕೆ ಬಂತು ನಿಂತಿತು. ರಾಜ್ಯವಲ್ಲದೇ ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಿಗೂ ಉತ್ತರಿಸಿದ್ದು ಉಲ್ಲೇಖನೀಯ ಎಂದು ಹೇಳಿದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಅಯ್ಯಾ ಎಂದರೆ ಸ್ವರ್ಗ ಎಲವೋ ಎಂದರೆ ನರಕ ಶರಣರು ಸ್ವರ್ಗ – ನರಕಗಳನ್ನು ನಾವಾಡುವ ಮಾತಿನಲ್ಲೆ ಕಲ್ಪಿಸಿದ್ದಾರೆಂದರೆ ಅವರು ಎಂತಹ ಜೀವನ ಸಾಗಿಸಿರಬೇಕೆಂಬುದಕ್ಕೆ ಅವರು ನಡೆ-ನುಡಿಗಳೆ ಸಾಕ್ಷಿ. ಆ ವಚನ ಸಾಹಿತ್ಯದಲ್ಲಿ ಮನುಷ್ಯರಿಗೆ ಸುಖ ಶಾಂತಿ ನೆಮ್ಮದಿಯ ದಾರಿ ತೋರಿಸುತ್ತದೆ ಎಂದು ನುಡಿದರು.


ರಾಜ್ಯದ ಬಹುತೇಕ ಜಿಲ್ಲೆಗಳಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ವಿದ್ಯಾರ್ಥಿಗಳು ಅವರೊಂದಿಗೆ ಸಂಯೋಜಕರು ಆಗಮಿಸಿದ್ದರು. ಜಮುರಾ ಕಲಾ ಲೋಕದ ಕಲಾವಿದರ ವಚನ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಮಾರಂಭಕ್ಕೆ ವಚನಕಮ್ಮಟ ಪರೀಕ್ಷೆಗಳ ನಿರ್ದೇಶಕ ಎಂ. ವೀರಭದ್ರಪ್ಪ ಸ್ವಾಗತಿಸಿದರು. ಶಿಕ್ಷಕಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಉಪನ್ಯಾಸಕ ಟಿ.ಪಿ.ಜ್ಞಾನಮೂರ್ತಿ ಅವರು ಶರಣು ಸಮರ್ಪಣೆ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!