Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

---Advertisement---

ಸುದ್ದಿಒನ್, ಚಿತ್ರದುರ್ಗ: ಜು.07 :  ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ,  ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು. ಜುಲೈ 10 ಕೊನೆ ದಿನಾಂಕ ಆಗಿದೆ.

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯ ನಿವಾಸಿ ಆಗಿರಬೇಕು, ಚಿತ್ರದುರ್ಗ ಜಿಲ್ಲೆಯ ಶಾಲಾ-ಕಾಲೇಜ್‍ಗಳಲ್ಲಿ ಓದಿರಬೇಕು. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.

ಅರ್ಜಿ ಸಲ್ಲಿಸಲು ಬಯಸುವವರು ಆನ್‍ಲೈನ್ ಮೂಲಕ hanjaneyacharitabletrust.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಸಮಾರಂಭದ ದಿನಾಂಕ ಹಾಗೂ ಸ್ಥಳವನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಿಳಿಸಲಾಗುವುದು. ಸ್ವವಿವರದ ಜೊತೆ ಪಾಸ್ ಫೋಟೋ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ  9743048006 ಅಥವಾ 8073050019 ಗೆ ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಘಟಕರಾದ ಸಿ.ಎನ್.ಕುಮಾರ್, ಎ.ನಂದೀಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment