Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

Clove for Diabetes : ಲವಂಗದಿಂದ ಮಧುಮೇಹವನ್ನು ಕಡಿಮೆ ಮಾಡುವುದು ಹೇಗೆ ?

---Advertisement---

ಸುದ್ದಿಒನ್ : ವಿಶ್ವಾದ್ಯಂತ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಒಮ್ಮೆ ಈ ಖಾಯಿಲೆ ಬಂದರೆ ಜೀವನ ಪರ್ಯಂತ ಕಾಡುತ್ತದೆ. ಆದ್ದರಿಂದ ಮುಂಚಿತವಾಗಿ ಕಾಳಜಿ ವಹಿಸಿದರೆ, ಆರೋಗ್ಯಕರ ಮತ್ತು ಸುಂದರವಾಗಿರಬಹುದು. ನಾವು ಮನೆಯಲ್ಲಿ ನಿತ್ಯ ಬಳಸುವ ಸಾಂಬಾರ ಪದಾರ್ಥಗಳಿಂದ ಹಲವಾರು ರೀತಿಯ ಕಾಯಿಲೆಗಳನ್ನು ಕಡಿಮೆ ಮಾಡಬಹುದು.

ಆಯುರ್ವೇದದಲ್ಲಿಯೂ ಅನೇಕ ರೋಗಗಳನ್ನು ಮನೆಮದ್ದುಗಳಿಂದ ಗುಣಪಡಿಸಲಾಗುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಹಲವು ಸಲಹೆಗಳು ಈಗಾಗಲೇ ತಿಳಿದಿದ್ದೇವೆ. ಅಡುಗೆಮನೆಯಲ್ಲಿರುವ ಲವಂಗವು ಮಧುಮೇಹವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಲವಂಗದಿಂದ ಮಧುಮೇಹವನ್ನು ಕಡಿಮೆ ಮಾಡುವುದು ಹೇಗೆ? ಮಧುಮೇಹಿಗಳಿಗೆ ಲವಂಗ ಸೇವನೆಯಿಂದ ಆಗುವ ಲಾಭಗಳೇನು ಎಂಬುದನ್ನು ಈಗ ತಿಳಿಯೋಣ.

ಔಷಧೀಯ ಗುಣಗಳು:

ಲವಂಗದಲ್ಲಿ ಹಲವಾರು ಔಷಧೀಯ ಗುಣಗಳಿವೆ. ವಿಟಮಿನ್ ಗಳು, ಮಿನರಲ್ಸ್ ಗಳು, ಖನಿಜಗಳು ಮತ್ತು ನಾರಿನಂಶವನ್ನು ಹೊಂದಿದೆ. ಅವು ಮ್ಯಾಂಗನೀಸ್ ಮತ್ತು ವಿಟಮಿನ್ ಕೆ ಅನ್ನು ಸಹ ಹೊಂದಿರುತ್ತವೆ. ಅವು ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡುತ್ತವೆ. ಲವಂಗದಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದರಿಂದ ಅನೇಕ ಸಮಸ್ಯೆಗಳನ್ನು ನಿಯಂತ್ರಿಸಬಹುದು.

ಒತ್ತಡವನ್ನು ಕಡಿಮೆ ಮಾಡುತ್ತದೆ :

ಆಹಾರದಲ್ಲಿ ಲವಂಗವನ್ನು  ಬಳಸುವುದರಿಂದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒತ್ತಡ ಮತ್ತು ಆತಂಕದಿಂದ ಮಧುಮೇಹ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಒತ್ತಡವು ಮಧುಮೇಹ ಮಾತ್ರವಲ್ಲದೆ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಲವಂಗವನ್ನು ತೆಗೆದುಕೊಳ್ಳುವುದರಿಂದ ಒತ್ತಡವನ್ನು ನಿಯಂತ್ರಿಸಬಹುದು.

ಮಧುಮೇಹಿಗಳಿಗೆ ಲವಂಗವನ್ನು ಹೇಗೆ ತೆಗೆದುಕೊಳ್ಳುವುದು :

ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಲವಂಗವನ್ನು ಸೇವಿಸುತ್ತಾರೆ. ಆದರೆ ಲವಂಗವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಅನುಮಾನವಿದೆ. ಪ್ರತಿ ದಿನ 8 ರಿಂದ 10 ಲವಂಗವನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ನಂತರ ಸೋಸಿ ಉಗುರು ಬೆಚ್ಚಗಿರುವಾಗ ಅದನ್ನು ಕುಡಿಯಿರಿ. ಮೂರು ತಿಂಗಳ ಕಾಲ ಈ ಪಾನೀಯವನ್ನು ಕುಡಿದರೆ ಉತ್ತಮ ಫಲಿತಾಂಶವನ್ನು ಕಾಣಬಹುದು. ಇದರ ಜೊತೆಗೆ ಆಹಾರ ಸೇವನೆಯೂ ನಿಯಂತ್ರಣದಲ್ಲಿರಬೇಕು.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...