Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಡೆಂಗ್ಯೂ ಪ್ರಕರಣ : ಸಂಸದ ಡಾ.ಮಂಜುನಾಥ್ ಹೇಳಿದ್ದೇನು..?

---Advertisement---

ಬೆಂಗಳೂರು: ರಾಜ್ಯದಲ್ಲಿ ದಿನೇ‌ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣಗಳು ಕಾಣಿಸಿಕೊಂಡಿವೆ. ಇದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆಯನ್ನು ಇನ್ನು ಕಂಡು ಹಿಡಿಯುವುದಕ್ಕೆ ಆಗಿಲ್ಲ. ಹೀಗಾಗಿ ಜನರೇ ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಸಂಬಂಧ ಸಂಸದ ಡಾ.ಮಂಜುನಾಥ್ ಅವರು ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

ಡೆಂಗ್ಯೂ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಡೆಂಗ್ಯೂ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಇಲ್ಲಿ ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾಗುತ್ತದೆ. ಡೆಂಗ್ಯೂ ಜ್ಚರ ನಿಯಂತ್ರಣವಾಗದೆ ಇದ್ದರೆ, ಮಾರಕ ಕಾಯಿಲೆಗಳಾದ ಚಿಕನ್ ಗೂನ್ಯಾ, ಝೀಕಾ ವೈರಸ್ ಕೂಡ ಕಾಣಿಸಿಕೊಳ್ಳುತ್ತದೆ. ಸರ್ಕಾರ ವೈದ್ಯಕೀಯ ತುರ್ತು ಚಿಕಿತ್ಸೆ ಘೋಷಿಸಬೇಕು ಎಂದಿದ್ದಾರೆ.

ಸರ್ಕಾರ ನಿಗಧಿ ಮಾಡಿದ ಹಣಕ್ಕಿಂತ ಹೆಚ್ಚಿನ ದರ ಪಡೆದರೆ ಅಂಥಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಂತಹ ಲ್ಯಾಬೋರೇಟರಿಗಳನ್ನು ಮುಚ್ಚಬೇಕು. ರಸ್ತೆಗಳು ಅಗೆದಿರುವುದು, ಗುಂಡಿ ಬಿದ್ದಿರುವುದನ್ನು ಸಕಾಲದಲ್ಲಿ ಮುಚ್ಚುತ್ತಿಲ್ಲ. ಹೀಗಾಗಿ ನೀರು ನಿಂತು ಡೆಂಗ್ಯೂ ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖರ, ನಗರಾಭಿವೃದ್ಧಿ ಇಲಾಖೆ, ಪಂಚಾಯತಿಗಳು, ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕೂಡ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಮುಂದೆ ಬರಬೇಕು. ಮಳೆಗಾಲದ ಸಮಸ್ಯೆಗಳಿಗೆ ಚಳಿಗಾಲದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಶಾಲಾ ಕಾಲೇಜುಗಳಿಗೂ ಆದೇಶ ಪ್ರತಿ ಕಳುಹಿಸಿ, ಮುಂಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment