Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆ : ಕಾರು ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ..!

---Advertisement---

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆ.ಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 41 ವರ್ಷ ವಯಸ್ಸಾಗಿತ್ತು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಬಿ.ಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್.

ಪ್ರತಾಪ್ ಕುಮಾರ್ ವಿಷ ಸೇವಿಸಿದ್ದನ್ನು ಕಂಡ ಸ್ಥಳೀಯರು ತಜ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವೆನ್ಯೂ ಕಾರಿನಲ್ಲಿ ಬಂದಿದ್ದ ಪ್ರತಾಪ್ ಕುಮಾರ್, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಆದರೆ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದು ಯಾಕೆ ಎಂಬುದು ಮಾತ್ರ ತಿಳಿದಿಲ್ಲ.

ಪ್ರತಾಪ್ ಕುಮಾರ್ ದಾವಣಗೆರೆಯ ಕತ್ತಲಗೆರೆ ಗ್ರಾಮದವರು. ಕಳೆದ ಹದಿನೈದು ವರ್ಷದ ಹಿಂದೆ ಬಿ.ಸಿ ಪಾಟೀಲ್ ಅವರ ಮಗಳು ಸೌಮ್ಯ ಅವರನ್ನು ಮದುವೆಯಾಗಿದ್ದರು. ಆದರೆ ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸುವಂಥದ್ದು ಏನಾಗಿತ್ತು ಎಂಬುದು ಕೂಡ ಗೊತ್ತಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಸತ್ಯಾಸತ್ಯತೆ ಹೊರ ಬರಬಹುದು. ಆದರೆ ಪ್ರತಾಪ್ ಸಾವಿನಿಂದಾಗಿ ಕುಟುಂಬದಲ್ಲಿ ದುಃಖ ಮರುಗಟ್ಟಿದೆ. ಮಗಳ ಗಂಡ ಇಷ್ಟು ಬೇಗ ಹೋಗಿದ್ದನ್ನು ನೆನೆದು ಬಿ.ಸಿ ಪಾಟೀಲ್ ಅವರು ದುಃಖಿತರಾಗಿದ್ದಾರೆ. ಇಡೀ ಕುಟುಂಬ ಪ್ರತಾಪ್ ಅವರನ್ನು ನೆನೆದು ಕಣ್ಣೀರು ಹಾಕುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...