Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡೆಂಗ್ಯೂ ಹೆಚ್ಚಳ : ಟಾಸ್ಕ್ ಫೋರ್ಸ್ ರಚಿಸಲು ಸಿಎಂ ಸೂಚನೆ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸಾವುಗಳ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಿಎಂ ಇಂದಿನ ಸಭೆಯಲ್ಲೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂಚಾಯತ್ ಸಿಇಒಗಳು ಹಾಗೂ ಡಿಹೆಚ್ಒಗಳಿಗೆ ಡರಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕೆಂದು ತಿಳಿಸಿದ್ದಾರೆ.

ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕಿದೆ. ಏನು ಮಾಡಬೇಕು, ಎಷ್ಟು ಹಣದ ಅಗತ್ಯವಿದೆ ತಿಳಿಸಿ. ತಕ್ಷಣ ಹಣ ಬಿಡುಗಡರಯಾಗುತ್ತದೆ. ಆದರೆ ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕು. ಹರಡದಂತೆ ನೋಡಿಕೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯಮ್ನು ಘೋಷಿಸುವ ಅಗತ್ಯವಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲೂ ಡೆಂಗ್ಯೂ ಪ್ರಕರಣಗಳನ್ನು ತಡೆಯಲು ವಿಶೇಷ ವಾರ್ಡ್ ರಚಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ವ್ಯವಸ್ಥೆ ಕಲ್ಪಿಸಬೇಕು.

ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದೆ. 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ಈಗಾಗಲೇ 503 ನಮ್ಮ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸುತ್ತಿವೆ. ನಮ್ಮ ಕ್ಲಿನಿಕ್ ಗಳಲ್ಲಿ ಲಭ್ಯವಿರುವ ಮಾಹಿತಿಯನ್ನು ಪ್ರಚುರ ಪಡಿಸುವ ಕೆಲಸವಾಗಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!