Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ : 10ಕ್ಕೂ ಹೆಚ್ಚು ಕಡೆ ಇಡಿ ದಾಳಿ.. 8 ಗಂಟೆ ನಾಗೇಂದ್ರ ಅವರ ವಿಚಾರಣೆ..!

---Advertisement---

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು, ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ್ದಾರೆ. ಪ್ರಕರಣದ ಎಲ್ಲಾ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದೆ. ಬೆಳಗ್ಗೆ 6 ಗಂಟೆಯಿಂದಾನೇ ದಾಳಿ ಆರಂಭವಾಗಿದ್ದು ಬೆಂಗಳೂರು, ಬಳ್ಳಾರಿ, ರಾಯಚೂರು ಮತ್ತು ಹಾವೇರಿ ಕಡೆಯಲ್ಲಿ ದಾಳಿ ನಡೆಸಿದ್ದಾರೆ. ನಿನ್ನೆಯೇ ಬಿ.ನಾಗೇಂದ್ರ ಅವರು ಸುಮಾರು 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.

ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್, ಪದ್ಮನಾಭ, ಪರಶುರಾಮ ಮತ್ತು ಬ್ಯಾಂಕ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬರೋಬ್ಬರಿ 187 ಕೋಟಿಯ ಬಹುದೊಡ್ಡ ಹಗರಣವಾಗಿದ್ದು ಅದರಲ್ಲಿ 94 ಕೋಟಿ ಹೈದ್ರಾಬಾದ್ ಗೆ ಟ್ರಾನ್ಸಫರ್ ಆಗಿದೆ. ನಕಲಿ ಕಂಪನಿಗಳಿಗೆ ನಕಲಿ ಅಮೌಂಟ್ ಮೂಲಕ ಟ್ರಾನ್ಸಫರ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಲೆಕ್ಕವಿಲ್ಲದೆ ಅಕ್ರಮ ಜಣ ವರ್ಗಾವಣೆ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರು ನಗರದ ಆರ್ ಆರ್ ಕಾಲೋನಿಯಲಗಲಿರುವ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಸದಸ್ಯರ ಮೊಬೈಲ್ ಎಲ್ಲಾ ಸೀಜ್ ಮಾಡಿ ದಾಳಿ ನಡೆಸಲಾಗಿದೆ. ಇನ್ನು ಈ ಅಕ್ರಮ ನಡೆದಾಗ ಬಿ.ನಾಗೇಂದ್ರ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಬಸನಗೌಡ ದದ್ದಲ್ ಅವರು ಈಗಲೂ ವಾಲ್ಮೀಕಿ ನಿಗಮದ ಅಧ್ಯಕ್ಷರೇ ಆಗಿದ್ದಾರೆ. ಹೀಗಾಗಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment