Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಗೆ ಮನೆ ಊಟ, ಹಾಸಿಗೆ ಇಲ್ಲ : ಕೋರ್ಟ್ ನಲ್ಲಿ ಆಗಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಜೈಲೂಟ ದೇಹಕ್ಕೆ ಹಿಡಿಸದೆ ದರ್ಶನ್ ಗೆ ವಾಂತಿ-ಬೇಧಿ ಆಗುತ್ತಿತ್ತಿದೆ ಎಂದು ಅವರ ಪರ ವಕೀಲರು ಮನೆ ಊಟ, ಹಾಸಿಗೆ, ಪುಸ್ತಕವನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಗೆ ಹಿನ್ನಡೆಯಾಗಿದೆ. ಮುಂದಿನ ವಿಚಾರಣೆ ತನಕ ಜೈಲಿನ ಎಲ್ಲಾ ಕೈದಿಗಳಿಗೂ ಸೌಲಭ್ಯ ಹೇಗಿರುತ್ತದೆಯೋ ಅದೇ ಥರ ದರ್ಶನ್ ಅವರಿಗೂ ಸೌಲಭ್ಯವನ್ನು ನೀಡಲಾಗುತ್ತದೆ.

 

ಜೈಲೂಟದಿಂದ ದರ್ಶನ್ ಸಾಕಷ್ಟು ತೂಕ ಕಳೆದುಕೊಳ್ಳುತ್ತಿದ್ದಾರೆ. ಹಾಸಿಗೆ, ಊಟ, ಪುಸ್ತಕ ನೀಡುವಂತೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಇಂದು ಕೋರ್ಟ್ ನಲ್ಲಿ ದರ್ಶನ್ ಪರ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು. ಜೈಲು ನಿಯಾಮಾವಳಿಗಳಲ್ಲಿ ಮನೆಯ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ ಅವರಿಗೆ ಮನೆ ಊಟದ ಅವಕಾಶ ನೀಡಿಲ್ಲ ಎಂದು ವಾದ ಮಾಡಿದರು.

ಈ ವಾದ ಆಲಿಸಿದ್ದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ..? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ..? ಜೈಲು ಅಧಿಕಾರಿಗಳಿಗೆ ನೀವೂ ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್ ಗೆ ಅರ್ಜಿ ಸಲಗಲಿಸಬಹುದೆ..? ಕೈದಿಗಳಿಗೆ ಇರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ ಎಂಬುದೆಲ್ಲವನ್ನು ಕೇಳಿದರು. ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು. ಕಾನೂ‌ನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ಪಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!