Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ನೋಡಲು ಬಂದ ಅಕ್ಕ-ಬಾವ : ತಾಯಿ ಬಳಿ ಕಣ್ಣೀರು ಹಾಕಿದ ಪವಿತ್ರಾ ಗೌಡ..!

Facebook
Twitter
Telegram
WhatsApp

ಬೆಂಗಳೂರು: ಮನೆ ಊಟಕ್ಕೆ, ಹಾಸಿಗೆಗೆ, ಪುಸ್ತಕಕ್ಕಾಗಿ ನಟ ದರ್ಶನ್ ಪರ ವಕೀಲರು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಅದಕ್ಕೆ ಅನುಮತಿ ನೀಡಲಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ದರ್ಶನ್ ಅವರ ಅಕ್ಕ ಮತ್ತು ಬಾವ, ಮಗ ಜೈಲಿಗೆ ಬಂದು ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಈ ವೇಳೆ ಹಣ್ಣು, ಬಟ್ಟೆಗಳನ್ನು ತಂದುಕೊಟ್ಟಿದ್ದಾರೆ. ಜೊತೆಗೆ ಸ್ನ್ಯಾಕ್ಸ್ ಕೂಡ ತಂದಿದ್ದರು. ಆದರೆ ಪೊಲೀಸಿನವರು ಅದಕ್ಕೆ ಅನುಮತಿ ನೀಡಿಲ್ಲ.

ಅತ್ತ ಪವಿತ್ರಾ ಗೌಡ ಅವರನ್ನು ನೋಡಲು ಆಕೆಯ ತಾಯಿ ಜೈಲಿಗೆ ಬಂದಿದ್ದಾರೆ. ಆಗ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ ಎನ್ನಲಾಗ್ತಾ ಇದೆ. ಪವಿತ್ರಾ ಗೌಡ ತಾಯಿ ಮುಂದೆ ಕಣ್ಣೀರು ಹಾಕುತ್ತಾ ದರ್ಶನ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ನನ್ನನ್ನ ಅವೈಡ್ ಮಾಡ್ತಾ ಇದಾರೆ, ನನ್ನಿಂದಾನೇ ಹೀಗೆಲ್ಲಾ ಆಗಿದ್ದು ಅಂತಿದ್ದಾರೆ ಎಂದೆಲ್ಲಾ ಅಳಲು ತೋಡಿಕೊಂಡಿದ್ದಾರಂತೆ‌. ಜೊತೆಗೆ ಮನೆಯ ಊಟಕ್ಕಾಗಿ ಕೋರ್ಟ್ ನಲ್ಲಿ ಮನವಿ ಮಾಡಲು ಪವಿತ್ರಾ ಗೌಡ ಕೂಎ ತಾಯಿ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್ ಸದ್ಯ ಪವಿತ್ರಾ ಗೌಡ ಜೊತೆಗೆ ಮಾತನಾಡುತ್ತಿಲ್ಲವಂತೆ.‌ ಒಂದೇ ಜೈಲಿನಲ್ಲಿ ಇದ್ದರು ಭೇಟಿಗೂ ಅವಕಾಶ ನೀಡುತ್ತಿಲ್ಲವಂತೆ. ಹೀಗಾಗಿ ಪವಿತ್ರಾ ಗೌಡಗೆ ಭಯ ಆಗಿದೆಯಂತೆ. ದರ್ಶನ್ ಫ್ಯಾಮಿಲಿ ಕೂಡ ಪವಿತ್ರಾ ಗೌಡ ಸಹವಾಸ ಬಿಟ್ಟರೆ ಮಾತ್ರ ಜೈಲಿನಿಂದ ಬಿಡಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಆ ಕಂಡಿಷನ್ ಗೆ ದರ್ಶನ್ ಅವರು ಒಪ್ಪಿಕೊಂಡಿದ್ದು, ಪವಿತ್ರಾ ಭೇಟಿಗೆ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!