Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಂಪಿಯನ್ ಟ್ರೋಫಿ-2025 : ಪಾಕಿಸ್ತಾನಕ್ಕೆ ಹೋಗ್ತಾರಾ ಇಲ್ವಾ ನಮ್ಮ ಟೀಂ ಇಂಡಿಯಾ ಆಟಗಾರರು..? ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

 

ಚಾಂಪಿಯನ್ಸ್ 2025 ಟ್ರೋಫಿಯನ್ನು ಪಾಕಿಸ್ತಾನ ಆಯೋಜನೆ ಮಾಡಲಾಗಿದೆ. ಈ ಟೂರ್ನಿಯನ್ನು ಪಾಕಿಸ್ತಾನದಲ್ಲಿಯೇ ಆಯೋಜನೆ ಮಾಡಿದ್ದು, ಭಾರತೀಯ ತಂಡ ಪಾಕಿಸ್ತಾನಕ್ಕೆ ಹೋಗುತ್ತಾರಾ ಇಲ್ವಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಆದರೆ ವರದಿಯ ಪ್ರಕಾರ ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಎನ್ನಲಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಬಗ್ಗೆ ಐಸಿಸಿ ಜೊತೆಗೆ ಚರ್ಚೆ ಮಾಡಲಿದೆ‌. ಟೀಂ ಇಂಡಿಯಾದ ಮ್ಯಾಚ್ ಗಳು ದುಬೈ ಅಥವಾ ಶ್ರೀಲಂಕಾದಲ್ಲಿ ನಡೆಯುವ ಸಾಧ್ಯತೆ ಇದೆ. ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ಭಾರತೀಯ ಆಟಗಾರರು ಪಾಕಿಸ್ತಾನಕ್ಕೆ ಹೋಗುವುದಕ್ಕೆ ಸಿದ್ದರಿಲ್ಲ ಎಂದು ವರದಿಯಾಗಿದೆ. ಆದರೂ ಈ ಬಗ್ಗೆ ಇನ್ನು ಮಾತುಕತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಕಳೆದ ವರ್ಷ ಏಕದಿನ ವಿಶ್ವಕಪ್ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬಂದಿತ್ತು. ಹೀಗಾಗಿ ಭಾರತವೂ ಪಾಕಿಸ್ತಾನಕ್ಕೆ ಬರಬೇಕು ಎಂಬ ಮಾತುಗಳು ಚರ್ಚೆಯಲ್ಲಿವೆ. ಇದರ ನಡುವೆ ಪಾಕಿಸ್ತಾನ ಇತ್ತಿಚೆಗೆ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಐಸಿಸಿಗೆ ತಿಳಿಸಿತ್ತು. ಲಾಹೋರ್ ನಲ್ಲಿಯೇ ಪಂದ್ಯವನ್ನು ಆಯೋಜಿಸುವುದಕ್ಕೆ ಮುಂದಾಗಿತ್ತು. ಆ ಪಂದ್ಯ ಮಾರ್ಚ್ ನಲ್ಲೇ ನಡೆಯಬೇಕಿತ್ತು. ಆದರೆ ಭಾರತ ತಂಡ ಹೋಗದೆ ಇದ್ದ ಕಾರಣ ಪಂದ್ಯ ನಡೆಯಲಿಲ್ಲ.

ಈಗ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ಮೈದಾನದ ದುರಸ್ತಿಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ಹಲವು ಟೀಂಗಳು ಈ ಚಾಂಪಿಯನ್ಸ್ ನಲ್ಲಿ ಸೆಣೆಸಾಡಲಿವೆ. ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಎ ಗುಂಪಿನಲ್ಲಿವೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಿ ಆಡುವುದು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಸದ್ಯದ ವರದಿಯ ಪ್ರಕಾರ ಅದು ಅಸಾಧ್ಯ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!