Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ : ಆಕೆ ಇನ್ನು ನೆನಪು ಮಾತ್ರ….!

---Advertisement---

ಸುದ್ದಿಒನ್, ಬೆಂಗಳೂರು, ಜುಲೈ. 11 : ಕನ್ನಡಿಗರ ಮನೆ ಮಾತಾಗಿದ್ದ, ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51 ವರ್ಷ) ಅವರು ನಿಧನರಾಗಿದ್ದಾರೆ.

ದೂರದರ್ಶನ ವಾಹಿನಿಯಲ್ಲಿ ಅಚ್ಚ ಕನ್ನಡ ಮಾತನಾಡುವ ಮೂಲಕ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದ್ದು ಕಿರುತೆರೆ ನಿರೂಪಕಿ, ನಟಿ ಕ್ಯಾನ್ಸರ್​​ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಕಿರುತೆರೆಯಲ್ಲಿ ಮೂಡಿಬಂದಿದ್ದ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅವರು  ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ, 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರದ ಮೂಲಕ ಕನ್ನಡಿಗರಿಗೆ ಚಿರಪರಿಚಿತವಾಗಿದ್ದರು.

ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂತಾಪ :ಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...