Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ : ಮಾಜಿ ಸಚಿವ ಬಿ.ನಾಗೇಂದ್ರ ಇಡಿ ವಶಕ್ಕೆ

---Advertisement---

 

 

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬೃಹತ್ ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ. ಎಸ್ಐಟಿ ಅಧಿಕಾರಿಗಳಿಂದ ಬಚಾವ್ ಆಗಿದ್ದ ನಾಗೇಂದ್ರ ಅವರು, ಇಡಿ ಅಧಿಕಾರಿಗಳ ವಶಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಸೂಕ್ತ ಸಾಕ್ಷಿಗಳ ಸಮೇತ ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿರುವ ಆರೋಪ ಇದೆ. ಅದರಲ್ಲಿ 89 ಕೋಟಿ ಹಣ ನಾಗೇಂದ್ರ ಅಂಡ್ ಟೀಂಗೆ ಸೇರಿದೆ ಎಂಬ ಆರೋಪವಿದೆ. ಹೀಗಾಗಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣವಾಗಿದ್ದು ಬಹುದೊಡ್ಡ ಹಗರಣ. ಇಷ್ಟು ದೊಡ್ಡಮಟ್ಟದ ಹಣ ಬೇರೆಲ್ಲೋ ಟ್ರಾನ್ಸಕ್ಷನ್ ಆಗಿರುವುದು ಸಚಿವರ ಗಮನಕ್ಕೆ ಬಂದಿರಲಿಲ್ಲವಂತೆ. ನಿಗಮಕ್ಕೆ ಸಂಬಂಧಿಸಿದಂತೆ ಸಚುವ ಬಿ.ನಾಗೇಂದ್ರ ಅವರು, ಇಷ್ಟು ದೊಡ್ಡ ಮಟ್ಟದ ಹಣ ಎಲ್ಲಿ ಹೋಯ್ತು ಎಂಬುದು ನನ್ನ ಗಮನಕ್ಕೆ ಬಂದಿಲ್ಲ ಎಂದಿದ್ದರು. ಬಳಿಕ ವಿಪಕ್ಷ ನಾಯಕರ ವಾಗ್ದಾಳಿಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕಾದ ಪರಿಸ್ಥಿತಿ ಬಂದಿತ್ತು. ಅದರಂತೆ ತಾವೇ ಮುಂದೆ ಬಂದು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇದೇ ಹಗರಣದಲ್ಲಿ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ.

ಆದರೆ ರಾಜ್ಯದಲ್ಲಿ ಒಂದು ಮೂಡಾ ಹಗರಣ ಮತ್ತೊಂದು ವಾಲ್ಮೀಕಿ ಹಗರಣ ಎರಡು ದೊಡ್ಡಮಟ್ಟದಲ್ಲಿಯೇ ನಡರದಿದ್ದು, ವಿಪಕ್ಷಗಳಿಗೆ ಇದು ಆಡಳಿತ ಪಕ್ಷವನ್ನು ಮಣಿಸಲು ಅಸ್ತ್ರವಾಗಿದೆ. ಎರಡು ವಿಚಾರಗಳನ್ನಿಟ್ಟುಕೊಂಡು ವಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಇನ್ನು ಲೋಕಾಯುಕ್ತ ಅಧಿಕಾರಿಗಳು ಸಂಬಂಧ ಪಟ್ಟ ಎಲ್ಲಾ ಕಡೆ ದಾಳಿ ನಡೆಸಿ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...