Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು | ಅಕ್ರಮ ಸಂಬಂಧ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಗಂಡನ  ಕೊಲೆ

---Advertisement---

 

ಸುದ್ದಿಒನ್, ಹಿರಿಯೂರು, ಜುಲೈ. 13 : ತಾಲ್ಲೂಕಿನ ಹುಲಗಲಕುಂಟೆ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯು, ಪತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ರವಿ (35) ವರ್ಷ ಎಂದು ಗುರುತಿಸಲಾಗಿದೆ. ಮೃತ ರವಿಯು 16 ವರ್ಷಗಳ ಹಿಂದೆ ರೇಖಾ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದನು. ಈ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು, ದಂಪತಿಗಳು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದರು.

ರವಿಯ ಸ್ನೇಹಿತ ಹುಲಗಲಕುಂಟೆ ಗ್ರಾಮದ ಸುನೀಲ್ ರವಿಯ ಮನೆಗೆ ಆಗಾಗ ಹೋಗಿ ರವಿ ಪತ್ನಿಯ ಸ್ನೇಹ ಬೆಳೆಸಿಕೊಂಡು ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ಇದು ಮೃತ ರವಿಗೆ ತಿಳಿದು ಸುನೀಲ್ ನೊಂದಿಗೆ ಜಗಳ ಮಾಡಿಕೊಂಡಿದ್ದನು. ಪ್ರಿಯಕರನ ಜೊತೆ ಸಂಬಂಧ ಮುಂದುವರಿಸಿದ ರೇಖಾ ಪತಿಯು ನನಗೆ ತೊಂದರೆ ನೀಡುತ್ತಾನೆಂದು ಪೊಲೀಸರಿಗೆ ಈಗಾಗಲೇ ಮೂರು ಬಾರಿ ದೂರು ನೀಡಿದ್ದಳು. ಬಳಿಕ ಪೊಲೀಸರು ರವಿಯನ್ನು ಕರೆಸಿಕೊಂಡು ಬುದ್ಧಿ ಹೇಳಿ ಕಳುಹಿಸಿದ್ದರು. ಇತ್ತ ಮೃತನ ಪತ್ನಿ ರೇಖಾ, ಪ್ರಿಯಕರ ಸುನೀಲ್ ಹಾಗೂ ಪರುವ ಎಂಬುವ ಮೂವರು ರವಿಗೆ ಈ ಹಿಂದೆಯೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಲಾಗಿದೆ.

ದಿನಾಂಕ 10/07/2024 ರಂದು ಜಮೀನಿನ ವಿಚಾರ ಮಾತನಾಡಲು ಬೆಂಗಳೂರಿನಿಂದ ರವಿ ಊರಿಗೆ ಬಂದಿದ್ದು ರಾತ್ರಿ 9 ಗಂಟೆಗೆ ಊಟ ಮುಗಿಸಿ ಹೊಸ ಮನೆಯ ಮೇಲೆ ಮಲಗುತ್ತೇನೆ ಎಂದು ಹೋಗಿದ್ದಾನೆ. ರಾತ್ರಿ ಹತ್ತರವರೆಗೂ ಫೋನಿನಲ್ಲಿ ಮಾತಾಡುತ್ತಿದ್ದ ಎನ್ನಲಾಗಿದ್ದು ಆನಂತರ ಆತನ ಪತ್ನಿ ರೇಖಾ, ಪರುವ  ಹಾಗೂ ಸುನೀಲ್ ನಿಗೆ ಹೇಳಿ ಕೊಲೆ ಮಾಡಿಸಿದ್ದಾರೆ ಎಂದು ಮೃತನ ತಾಯಿ ಪಾರ್ವತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಕೊಲೆ ಆರೋಪಿಗಳಾದ  ಸುನೀಲ್ ಮತ್ತು ರೇಖಾರನ್ನು ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ಪಿಎಸ್ಐ ಮಹೇಶ್ ಗೌಡ ತಂಡ ಬಂಧಿಸಿದ್ದು ಮತ್ತೊಬ್ಬ ಆರೋಪಿಗೆ ಬಲೆ ಬೀಸಲಾಗಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...