Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರ್ಣಾ ಬಲಿ ಪಡೆದ ಶ್ವಾಸಕೋಶದ ಕ್ಯಾನ್ಸರ್ ಗೆ ಧೂಮಪಾನ ಮಾಡದವರು ಬಲಿ..!

Facebook
Twitter
Telegram
WhatsApp

 

ಬೆಂಗಳೂರು : ಮಧುರ ಕಂಠದ, ಅಪ್ಪಟ ಕನ್ನಡ ಕಲಾವಿದೆ ಅಪರ್ಣಾ ವಸ್ತಾರೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಕಳೆದ ಎರಡು ವರ್ಷದಿಂದ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಈ ಕ್ಯಾನ್ಸರ್ ಧೂಮಪಾನ ಮಾಡದೆ ಇರುವವರಲ್ಲಿಯೂ ಕಾಣಿಸಿಕೊಳ್ಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

ಕ್ಯಾನ್ಸರ್ ನಲ್ಲಿ ನಾನಾ ವಿಧಗಳಿವೆ. ಅದರಲ್ಲಿ ಶ್ಚಾಸಕೋಶದ ಕ್ಯಾನ್ಸರ್ ಕೂಡ ಒಂದು. ಧೂಮಪಾನ ಮಾಡಿದರೆ ಕ್ಯಾನ್ಸರ್ ಬರುತ್ತೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾದರೂ ಧೂಮಪಾನ ಮಾಡದ ಶೇಕಡ 50 ರಷ್ಟು ಮಂದಿ ಇದಕ್ಕೆ ತುತ್ತಾಗಿದ್ದಾರೆ ಎಂಬುದು ಶಾಕಿಂಗ್ ನ್ಯೂಸ್. ಮುಂಬೈ ಟಾಟಾ ಮೆಮೋರಿಯಲ್ ಸೆಂಟರ್ ನ ವೈದ್ಯರ ತಂಡ ಈ ಸಂಬಂಧದ ವರದಿಯನ್ನು ಪ್ರಕಟ ಮಾಡಿದೆ‌. ಲಂಗ್ ಕ್ಯಾನ್ಸರ್ ಮೂರನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿ ಪತ್ತೆಯಾಗಿದೆ. 2020ರಲ್ಲಿ ಸುಮಾರು 18.5 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ 16.6 ಲಕ್ಷ ಅಥವಾ 10.9% ಸಾವುಗಳಿಗೆ ಕಾರಣವಾಗಿದೆ.

ಧೂಮಪಾನ ಮಾಡದೆ ಹೋದರೂ ಈ ರೀತಿ ಶ್ವಾಸಕೋಶದ ಕ್ಯಾನ್ಸರ್ ಗೆ ತುತ್ತಾಗುವುದಕ್ಕೆ ಒಂದು ವಾಯುಮಾಲಿನ್ಯ ಕೂಡ ಕಾರಣವಾಗಿದೆ. ವಾಯು ಮಾಲಿನ್ಯ ಶ್ವಾಸಕೋಶದ ಕ್ಯಾನ್ಸರ್ ಗೆ ಪ್ರಮುಖ ಅಪಾಯಕಾರಿ ಅಂಶವಾಗಿದೆ. ಧೂಮಪಾನ ಮಾಡದವರು ಇದ್ದಕ್ಕೆ ತುತ್ತಾಗುತ್ತಾರೆ. ಕಲ್ನಾರಿನ, ಕ್ರೋಮಿಯಂ, ಕ್ಯಾಡಿಯಂ, ಆರ್ಸೆನಿಕ್ ಮತ್ತು ಕಲ್ಲಿದ್ದಲು, ಮನೆಯ ಹೊಗೆ ಇವೆಲ್ಲವೂ ಶ್ವಾಸಕೋಶದ ಕ್ಯಾನ್ಸರ್ ಹರಡಲು ಕಾರಣವಾಗುತ್ತವೆ ಎಂದು ಹೇಳಲಾಗುತ್ತದೆ. ಜೊತೆಗೆ ಸಿಗರೇಟು ಸೇದುವವರಿಗಿಂತ ಅದರ ಹೊಗೆ ಕುಡಿಯುವವರಲ್ಲಿಯೂ ಹೆಚ್ಚು ಅಪಾಯಕಾರಿ ಎಂದು ವೈದ್ಯರೇ ಹೇಳುತ್ತಾರೆ. ಈ ರೀತಿಯ ಪರಿಸರದಿಂದೆಲ್ಲಾ ಕೊಂಚ ದೂರ ಇರುವುದು ಒಳಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!