Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪರ್ಣಾ ಬಲಿ ಪಡೆದ ಶ್ವಾಸಕೋಶದ ಕ್ಯಾನ್ಸರ್ ಗೆ ಧೂಮಪಾನ ಮಾಡದವರು ಬಲಿ..!

---Advertisement---

 

ಬೆಂಗಳೂರು : ಮಧುರ ಕಂಠದ, ಅಪ್ಪಟ ಕನ್ನಡ ಕಲಾವಿದೆ ಅಪರ್ಣಾ ವಸ್ತಾರೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಕಳೆದ ಎರಡು ವರ್ಷದಿಂದ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಈ ಕ್ಯಾನ್ಸರ್ ಧೂಮಪಾನ ಮಾಡದೆ ಇರುವವರಲ್ಲಿಯೂ ಕಾಣಿಸಿಕೊಳ್ಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

ಕ್ಯಾನ್ಸರ್ ನಲ್ಲಿ ನಾನಾ ವಿಧಗಳಿವೆ. ಅದರಲ್ಲಿ ಶ್ಚಾಸಕೋಶದ ಕ್ಯಾನ್ಸರ್ ಕೂಡ ಒಂದು. ಧೂಮಪಾನ ಮಾಡಿದರೆ ಕ್ಯಾನ್ಸರ್ ಬರುತ್ತೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾದರೂ ಧೂಮಪಾನ ಮಾಡದ ಶೇಕಡ 50 ರಷ್ಟು ಮಂದಿ ಇದಕ್ಕೆ ತುತ್ತಾಗಿದ್ದಾರೆ ಎಂಬುದು ಶಾಕಿಂಗ್ ನ್ಯೂಸ್. ಮುಂಬೈ ಟಾಟಾ ಮೆಮೋರಿಯಲ್ ಸೆಂಟರ್ ನ ವೈದ್ಯರ ತಂಡ ಈ ಸಂಬಂಧದ ವರದಿಯನ್ನು ಪ್ರಕಟ ಮಾಡಿದೆ‌. ಲಂಗ್ ಕ್ಯಾನ್ಸರ್ ಮೂರನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿ ಪತ್ತೆಯಾಗಿದೆ. 2020ರಲ್ಲಿ ಸುಮಾರು 18.5 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ 16.6 ಲಕ್ಷ ಅಥವಾ 10.9% ಸಾವುಗಳಿಗೆ ಕಾರಣವಾಗಿದೆ.

ಧೂಮಪಾನ ಮಾಡದೆ ಹೋದರೂ ಈ ರೀತಿ ಶ್ವಾಸಕೋಶದ ಕ್ಯಾನ್ಸರ್ ಗೆ ತುತ್ತಾಗುವುದಕ್ಕೆ ಒಂದು ವಾಯುಮಾಲಿನ್ಯ ಕೂಡ ಕಾರಣವಾಗಿದೆ. ವಾಯು ಮಾಲಿನ್ಯ ಶ್ವಾಸಕೋಶದ ಕ್ಯಾನ್ಸರ್ ಗೆ ಪ್ರಮುಖ ಅಪಾಯಕಾರಿ ಅಂಶವಾಗಿದೆ. ಧೂಮಪಾನ ಮಾಡದವರು ಇದ್ದಕ್ಕೆ ತುತ್ತಾಗುತ್ತಾರೆ. ಕಲ್ನಾರಿನ, ಕ್ರೋಮಿಯಂ, ಕ್ಯಾಡಿಯಂ, ಆರ್ಸೆನಿಕ್ ಮತ್ತು ಕಲ್ಲಿದ್ದಲು, ಮನೆಯ ಹೊಗೆ ಇವೆಲ್ಲವೂ ಶ್ವಾಸಕೋಶದ ಕ್ಯಾನ್ಸರ್ ಹರಡಲು ಕಾರಣವಾಗುತ್ತವೆ ಎಂದು ಹೇಳಲಾಗುತ್ತದೆ. ಜೊತೆಗೆ ಸಿಗರೇಟು ಸೇದುವವರಿಗಿಂತ ಅದರ ಹೊಗೆ ಕುಡಿಯುವವರಲ್ಲಿಯೂ ಹೆಚ್ಚು ಅಪಾಯಕಾರಿ ಎಂದು ವೈದ್ಯರೇ ಹೇಳುತ್ತಾರೆ. ಈ ರೀತಿಯ ಪರಿಸರದಿಂದೆಲ್ಲಾ ಕೊಂಚ ದೂರ ಇರುವುದು ಒಳಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment