Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವುದು ಅನಿವಾರ್ಯ : ಸಂಸದ ಗೋವಿಂದ ಕಾರಜೋಳ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜುಲೈ. 12 :  ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಇಂದಿನ ಸಮಾಜದಲ್ಲಿ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ನಗರದ ಪಿಳೇಕೆರನಹಳ್ಳಿಯಲ್ಲಿ ಶುಕ್ರವಾರ ಬಾಪೂಜಿ ಸಮೂಹ ಸಂಸ್ಥೆಯ ಕೆ.ಎಂ.ಎಸ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆ ಹೊಂದಬೇಕು. ಜೀವನಕ್ಕಾಗಿ ಇತರ ಕೌಶಲ್ಯಗಳನ್ನು ಕಲಿತು ಸಮಾಜದಲ್ಲಿ ತಮ್ಮ ಛಾಪು ಮೂಡಿಸಬೇಕು. ಈ ಕಾಲೇಜಿನಲ್ಲಿ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣ ನೀಡುತ್ತಾ ಬಂದಿದೆ ಎಂದರು.

ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಕೆ.ಎಂ.ವೀರೇಶ್ ಮಾತನಾಡಿ, ಪದವಿ ಶಿಕ್ಷಣ ಮುಗಿದ ಬಳಿಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಶಿಕ್ಷಣ ಪಡೆದು ದೇಶಕ್ಕೆ ತಮ್ಮ ಸೇವೆ ನೀಡುವಂತಹ ಕಾರ್ಯದಲ್ಲಿ ತಮ್ಮನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ. ಚೇತನ್, ಬಾಪೂಜಿ ಸಮೂಹ ಸಂಸ್ಥೆಗಳ ಸಹ ನಿರ್ದೇಶಕಿ ಮೇಘನ ಕೆ.ಎಂ. ಚೇತನ್, ಕೆ.ಎಂ.ಎಸ್ ಪ್ರಥಮ ದರ್ಜೆ  ಕಾಲೇಜಿನ ಪ್ರಾಂಶುಪಾಲೆ ಡಾ.ಮಂಜುಳ.ಕೆ, ಕೆ.ಎಂ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎನ್.ವೀರೇಶ್, ಬಜೆಪಿ ವಕ್ತಾರ ನಾಗರಾಜ ಬೆಂದ್ರೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!