Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ : ರವಿ ಹೆಗಡೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ.13 : ಪ್ರಸಕ್ತ ಸಮಾಜದಲ್ಲಿ ಮಾಧ್ಯಮ ಎನ್ನುವುದು ಭ್ರಷ್ಟಾಚಾರ ಮಾಡಲು ಸಲಕರಣೆಯಾಗಿ ಬಳಕೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರು ನಮ್ಮ ನಡುವೆಯೇ ಇದ್ದಾರೆ. ಇಂತಹವರನ್ನು ಹುಡುಕಿ ಸಮಾಜದ ಎದುರು ಬಯಲು ಮಾಡಬೇಕು  ಎಂದು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ “ಪತ್ರಿಕಾ ದಿನಾಚರಣೆ”ಯಲ್ಲಿ ಭಾಗವಹಿಸಿ ಅವರು ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

ಜುಲೈ ಒಂದನೇ ತಾರೀಖನ್ನು ಪತ್ರಿಕಾ ದಿನಾಚರಣೆ ಎನ್ನುವ ಬದಲು ಮಾಧ್ಯಮ ದಿನಾಚರಣೆ ಎಂದು ಕರೆದರೆ ಹೆಚ್ಚು ಅರ್ಥಪೂರ್ಣ ಎನಿಸುತ್ತದೆ. ಏಕೆಂದರೆ ಮೊದಲ ಪತ್ರಿಕೆ ಪ್ರಾರಂಭವಾದ ದಿನಗಳಲ್ಲಿ ಮುದ್ರಣ ಮಾಧ್ಯಮ ಅಸ್ತಿತ್ವದಲ್ಲಿತ್ತು.  ಆದರೆ ಈಗ ಟಿ.ವಿ. ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮವೂ ಕೂಡ ಅಸ್ತಿತ್ವದಲ್ಲಿರುವುದರಿಂದ, ಮಾಧ್ಯಮ ದಿನಾಚರಣೆ ಎನ್ನುವುದು ಸೂಕ್ತ.  ಈ ದಿನವನ್ನು ಆತ್ಮಾವಲೋಕ ದಿನವಾಗಿ ಆಚರಿಸಬೇಕು. ವೃತ್ತಿಪರತೆಯನ್ನು ಅಳವಡಿಸಕೊಳ್ಳುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ತರಲು ಪ್ರಯತ್ನಿಸಬೇಕು ಎಂದರು.

ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ. ಭ್ರಷ್ಟಾಚಾರಾದ ಕುರಿತು ಪ್ರಕಟವಾದ ಸುದ್ದಿಗಳಿಗಿಂತ, ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಯೋಚಿಸುವ ಅನಿವಾರ್ಯತೆಯಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರನ್ನು ಖಂಡಿಸಬೇಕು. ಪತ್ರಕರ್ತರ ಸಂಘಗಳು ಇಂತಹವರಿಗೆ ಮನ್ನಣೆ ನೀಡಬಾರದು ಎಂದು ರವಿ ಹೆಗಡೆ ಹೇಳಿದರು.

ಸರ್ಕಾರಗಳನ್ನು ಸರಿದಾರಿಗೆ ತರುವ ಶಕ್ತಿ ಮಾಧ್ಯಮಗಳಿಗಿದೆ. ಹಗರಣಗಳನ್ನು ಬಯಲಿಗೆ ಎಳೆಯುವ ಮೂಲಕ ಭ್ರಷ್ಟಾಚಾರನ್ನು ತಡೆಗಟ್ಟಬಹದು. ರಾಜ್ಯದಲ್ಲಿ ನಡೆದ ಪಿ.ಎಸ್.ಐ ನೇಮಕಾತಿ ಹಗರಣವನ್ನು ಮಾಧ್ಯಮಗಳು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದವು. ಇದರಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನವಾಯಿತು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment