Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಧ್ಯಮಗಳ ಮೂಲಕ ಸಾಮಾಜಿಕ ನ್ಯಾಯ ಹಾಗೂ ಬದಲಾವಣೆ : ಬಂಜೆಗೆರೆ ಜಯಪ್ರಕಾಶ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜುಲೈ.13 : ಬ್ರಿಟೀಷರಿಂದ ಸ್ವಾತಂತ್ರ ಪಡೆದ ನಂತರ ದೇಶದಲ್ಲಿ ಸಾಮಾಜಿಕ ನ್ಯಾಯ ಹಾಗೂ ಬದಲಾವಣೆ ತರುವ ನಿಟ್ಟಿನಲ್ಲಿ ಸಂವಿಧಾನ ರಚನೆ ಮಾಡಲಾಯಿತು. ಆ ನಂತರದಲ್ಲಿ ದೇಶ ಆಳಿದ ಎಲ್ಲಾ ಸರ್ಕಾರಗಳು ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿ ಹಾಗೂ ಬದಲಾವಣೆ ತರುವಂತೆ ಮಾಡುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಕವಿ ಹಾಗೂ ಜನಪರ ಹೋರಾಟಗಾರ ಬಂಜೆಗೆರೆ ಜಯಪ್ರಕಾಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ “ಪತ್ರಿಕಾ ದಿನಾಚರಣೆ”ಯಲ್ಲಿ ಭಾಗವಹಿಸಿ ಪತ್ರಕರ್ತರು, ಸಂವಿಧಾನ  ಮತ್ತು ಸಾಮಾಜಿಕ ನ್ಯಾಯ ಎಂಬ ವಿಷಯದ ಕುರಿತು ಮಾತನಾಡಿದರು.

ಖಾತ್ಯ ಲೇಖಕ ಡಾ.ಬಾಲಗೋಪಾಲರಾವ್ ಅವರು ದೇಶದಲ್ಲಿ ಸಾಮಾಜಿಕ ತತ್ವಗಳನ್ನು ಬಿತ್ತುವಲ್ಲಿ, ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳು ವಹಿಸಿದ ಪಾತ್ರದ ಕುರಿತು ಕೃತಿ ರಚಿಸಿದ್ದಾರೆ. ಇದರ ಕನ್ನಡ ಅನುವಾದವನ್ನು ಸ್ವತಃ ನಾನೇ ಮಾಡಿದ್ದು, ಸದ್ಯದಲ್ಲಿಯೇ ಕೃತಿ ಬಿಡುಗಡೆಯಾಗಲಿದೆ ಎಂದರು.

ನಾಡಿನಲ್ಲಿ ಜನಪರ, ರೈತ ಹಾಗೂ ಪರಿಸರ ರಕ್ಷಣೆ ಹೋರಾಟಗಳಲ್ಲಿ ಪತ್ರಿಕೆಗಳು ಹಾಗೂ ಪತ್ರಕರ್ತರ ಪಾತ್ರ ದೊಡ್ಡದಿದೆ. ಸಾಮಾಜಿಕ ಹೋರಾಟಗಾರಿಗೆ ಬೆನ್ನೆಲುಬಾಗಿ ನಿಂತು ಪತ್ರಕರ್ತರು ಕಾರ್ಯನಿರ್ವಹಿಸುತ್ತಾರೆ. ಬಹಳಷ್ಟು ವಿಷಯಗಳು ಪತ್ರಕರ್ತರ ಮೂಲಕವೇ ಸಾಮಾಜಿಕ ಹೋರಾಟಗಾರರಿಗೆ ತಲುಪುತ್ತವೆ. ಸರ್ಕಾರದ ನೀತಿ ನಿರೂಪಣೆಗಳ ಬಗ್ಗೆ ಜನರಿಗೆ ಮುಂಚಿತವಾಗಿ ಜಾಗೃತಗೊಳಿಸುವ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಾ ಬಂದಿವೆ ಎಂದು ಬಂಜೆಗೆರೆ ಜಯಪ್ರಕಾಶ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!