Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಡ ಸತ್ತ ಮೇಲೆ ಖಿನ್ನತೆಗೆ ಒಳಗಾದ ಹೆಂಡತಿ 13 ವರ್ಷದ ಮಗನನ್ನು ಸಾಯಿಸಿ, ತಾನೂ ಆತ್ಮಹತ್ಯೆ : ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ..!

Facebook
Twitter
Telegram
WhatsApp

 

ಬೆಂಗಳೂರು: ಯಲಹಂಕದ RNZ ಅಪಾರ್ಟ್ಮೆಂಟ್ ನಲ್ಲಿ ತನ್ನ 13 ವರ್ಷದ ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಭಾರ್ಗವ್ ಪುಲಿವರ್ತ ಹಾಗೂ 40 ವರ್ಷದ ರಮ್ಯಾ ಮೃತರು. 19 ವರ್ಷದ ಮಗಳು ಪಿಜಿ ಯಲ್ಲಿದ್ದು ಓದುತ್ತಿದ್ದಾಳೆ.

ರಮ್ಯಾ, ಶ್ರೀದರ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದು ಅಂತರ್ಜಾತಿ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ಕಳೆದ ಮೂರು‌ ತಿಂಗಳ ಹಿಂದೆ ಶ್ರೀದರ್ ನಿಧನರಾಗಿದ್ದರು. ಇದಾದ ಮೇಲೆ ಎಲ್ಲಾ ಜವಾಬ್ದಾರಿ ರಮ್ಯಾ ಮೇಲೆ ಬಿತ್ತು. ಇವರಿದ್ದ ಪ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳ ಶಿಕ್ಷಣ ಹೀಗೆ ಮನೆ ಖರ್ಚೆಲ್ಲಾ ರಮ್ಯಾಗೆ ನಿಭಾಯಿಸುವುದಕ್ಕೆ ಕಷ್ಟವಾಯಿತು. ಗಂಡನ ಸಾವಿನ ಬಳಿಕ ರಮ್ಯಾ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಎಷ್ಟೋ ಸಲ ನಾನೂ ಸಾಯಿತ್ತೀನಿ ಎಂದೆಲ್ಲಾ ಹೇಳಿದ್ದರಂತೆ.

ಇದೀಗ ಮಗನನ್ನು ಕೊಂದು, ತಾನೂ ನೇಣಿಗೆ ಶರಣಾಗಿದ್ದಾರೆ. ಮೊದಲಿಗೆ ಮಗನಿಗೆ ನೇಣು ಬಿಗಿದು ಕೊಲ್ಲಲಾಗಿದೆ. ಬಳಿಕ ಆತನನ್ನು ಹಾಸಿಗೆ ಮೇಲೆ ಮಲಗಿಸಿ, ರಮ್ಯಾ ಅವರು ನೇಣಿ ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ರಮ್ಯಾ ಅವರು ಈ ಸಂಬಂಧ ಪೊಲೀಸರು, ಡಾಕ್ಟರ್ ಹಾಗೂ ಮಗಳಿಗೆ ಪತ್ರ ಬರೆದಿಟ್ಟಿದ್ದಾರೆ. ಮಗಳು ಇನ್ನು ಓದುತ್ತಿದ್ದಾಳೆ. 19 ವರ್ಷ. ಈಗ ಮಗಳಿಗೂ ಯಾರು ದಿಕ್ಕು ಎಂಬ ಚಿಂತೆ ಕಾಡುತ್ತಿದೆ. ಅಮ್ಮ, ತಮ್ಮನನ್ನು ಕಳೆದುಕೊಂಡ ಆ ಯುವತಿ ಈಗ ಕಣ್ಣೀರಿಡುತ್ತಿದ್ದಾಳೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!