Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಡಿ ಬಂಧನದ ಭೀತಿಯಿಂದ ನಾಪತ್ತೆಯಾಗಿದ್ದ ದದ್ದಲ್ ವಿಧಾನಸೌಧದಲ್ಲಿ ದಿಢೀರ್ ಪತ್ತೆ..!

Facebook
Twitter
Telegram
WhatsApp

ಬೆಂಗಳೂರು: ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣದಲ್ಲಿ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ಕೇಳಿ ಬಂದಿದೆ. ಈಗಾಗಲೇ ಅಧಿಕಾರಿಗಳು ಅವರ ಮನೆ, ಕಚೇರಿಯನ್ನೆಲ್ಲಾ ಜಾಲಾಡಿದ್ದಾರೆ. ಇದರ ನಡುವೆ ಇಡಿ ಅಧಿಕಾರಿಗಳು ದದ್ದಲ್ ಅವರನ್ನು ವಶಕ್ಕೆ ಪಡೆದು, ಇನ್ನಷ್ಟು ವಿಚಾರಣೆ ನಡೆಸುವುದಕ್ಕೆ ತಯಾರಿ ನಡೆಸಿದ್ದರು. ಆದರೆ ಶಾಸಕ ದದ್ದಲ್ ಅಂದಿನಿಂದಲೂ ಇಡಿ ಅಧಿಕಾರಿಗಳಿಗೆ ಸಿಗದಂತೆ ನಾಪತ್ತೆಯಾಗಿದ್ದರು. ಇದೀಗ ವಿಧಾನಸೌಧದಲ್ಲಿ ಪತ್ತೆಯಾಗಿದ್ದಾರೆ.

ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಎಲ್ಲಾ ಶಾಸಕರು, ಸಚಿವರು ಈ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಇಡಿ ಬಂಧನದ ಭೀತಿಯಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಶಾಸಕ ಬಸನಗೌಡ ದದ್ದಲ್ ಅವರು ಕಾಣಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಕಾಣಿಸಿಕೊಂಡ ದದ್ದಲ್ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.

ಇನ್ನು ಇದೇ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ನಾನು ಎರಡು ದಿನ ಊರಿಗೆ ಹೋಗಿದ್ದೆ. ಇವತ್ತು ಕಲಾಪಕ್ಕೆ ಬಂದಿದ್ದೇನೆ. ಯಾವುದೇ ಇಡಿ ನೋಟೀಸ್ ನನಗೆ ತಲುಪಿಲ್ಲ. ಯಾವುದೇ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ಇವತ್ತು ಬಂದಿರುವುದು ಅಧಿವೇಶನಕ್ಕಾಗಿ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದದ್ದಲ್ ಅವರಿಗಾಗಿಯೂ ಇಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು‌. ಮಳೆಗಾಲದ ಅಧಿವೇಶನದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಹಗರಣಗಳ ವಿಚಾರವನ್ನೇ ಇಟ್ಟುಕೊಂಡು ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!