Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನು ಮುಂದೆ ಚಿತ್ರದುರ್ಗದ ಉದ್ಯಾನಗಳಲ್ಲಿ ಓಪನ್ ಜಿಮ್, ಯೋಗ ಪ್ಲಾಟ್‍ಫಾರಂ ರಚಿಸಲು ಚಿಂತನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ. 15 :  ಚಿತ್ರದುರ್ಗ ನಗರದ ಎಲ್ಲಾ ಉದ್ಯಾನವನಗಳಲ್ಲಿ ಓಪನ್ ಜಿಮ್ ಮತ್ತು ಯೋಗದ ಪ್ಲಾಟ್‍ಫಾರಂಗಳನ್ನು ರಚಿಸಲು ಉದ್ದೇಶಿಸಲಾಗಿದೆ ಎಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.

 

ಇಲ್ಲಿನ ದೊಡ್ಡಪೇಟೆಯ ಶ್ರೀ ವಾಸವಿ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಪತಂಜಲಿ ಯೋಗ ಸಂಸ್ಥೆಯ ವತಿಯಿಂದ “ನನ್ನ ಯೋಗ ನನ್ನ ಕ್ಷೇಮ” ಎನ್ನುವ ಧ್ಯೇಯದೊಂದಿಗೆ “ಸಹ ಯೋಗ ಶಿಕ್ಷಕರ ತರಬೇತಿ” ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಜಾತಿರಹಿತವಾದದು ಮತ್ತು ಸಮಾಜದ ಎಲ್ಲಾ ವರ್ಗದ ಜನರ ಆರೋಗ್ಯಕ್ಕೆ ಅವಶ್ಯಕವಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗವು ಜೀವನದ ಎಲ್ಲಾ ವಿಭಾಗಗಳಲ್ಲಿ ಅವಶ್ಯಕವಾಗಿದೆ ಎಂದರು.
ಉದ್ಯಮಿ ಭರತ್ ಕುಮಾರ್ ಮಾತನಾಡಿ, ಎಲ್ಲರೂ ಯೋಗವನ್ನು ಕಲಿತು ರೋಗ ಮುಕ್ತರಾಗಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪತಂಜಲಿ ಯೋಗ  ಸಂಸ್ಥೆಯ ದಕ್ಷಿಣ ಭಾರತದ ಪ್ರಭಾರಿ ಭವರಲಾಲ್ ಆರ್ಯ, ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಸತ್ಯನಾರಾಯಣ ಶ್ರೇಷ್ಠಿ, ವೈದ್ಯಾಧಿಕಾರಿ ರವಿಕುಮಾರ್, ವ್ಯಾಪಾರಿಗಳಾದ ಲತಾರವಿ, ಪತಂಜಲಿ ಸಂಸ್ಥೆಯ ಚಿತ್ರದುರ್ಗ ಪ್ರಭಾರಿಗಳಾದ ದೇವಾನಂದ ನಾಯ್ಕ್, ಶ್ರೀನಿವಾಸ್, ಗುರುಮೂರ್ತಿ, ಕೆಂಚವೀರಪ್ಪ, ಶ್ರೀರಾಮ್ ನರೇಶ್, ನವೀನ್, ಕೃಷ್ಣಮೂರ್ತಿ ಮತ್ತು ಯೋಗ ಶಿಕ್ಷಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!