Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನದಿ ನೀರಿಗೆ ಪಂಪ್ ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆ..? ಪರಿಹಾರವೇನು..? ಡಿಕೆ ಶಿವಕುಮಾರ್ ಚರ್ಚೆ

ಡಿಕೆ ಶಿವಕುಮಾರ್
---Advertisement---

 

 

ಬೆಂಗಳೂರು: ಇಂದು ಎರಡನೇ ದಿನದ ಅಧಿವೇಶನ ಶುರುವಾಗಿದ್ದು, ಚಾನೆಲ್ ಗಳಲ್ಲಿ ನದಿ ನೀರಿಗೆ ಮೋಟಾರ್ ಹಾಕಿ ನೀರೆತ್ತುವ ಸಮಸ್ಯೆ ಹಲವು ಕಡೆ ಇದೆ. ಅದಕ್ಕೆ ಪರಿಹಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಅಧಿವೇಶನದಲ್ಲಿ ಮಾತನಾಡಿದ್ದಾರೆ.

ಮಂಡ್ಯ, ಹಾಸನ, ಬಾಗಲಕೋಟೆ, ಬೀದರ್, ಗುಲ್ಬರ್ಗ ಸೇರಿದಂತೆ ಹಲವೆಡೆ ನೀರಾವರಿ ಇರುವ ಕಡೆ ಸಮಸ್ಯೆ ಇದೆ. ಎಲ್ಲಿಯೂ ನೀರು ಹೋಗ್ತಾ ಇಲ್ಲ. ಪಂಪ್‌ಮಾಡಿ ಬಿಟ್ಟು ನೀರು ಬಿಡಲಾಗಿದೆ. ಮೊನ್ನೆ ಕೂಡ ಈ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ನಾವೀಗ ಎತ್ತಿನಹೊಳೆ ಮಾಡ್ತಾ ಇದ್ದೀವಿ. ಅದಕ್ಕೆ ಈಗಾಗಲೇ 25 ಕೋಟಿ ಖರ್ಚಾಗಿದೆ. ನನಗೆ, ನಮ್ಮ ಶಾಸಕರಿಗೂ ಭಯ ಆಗ್ತಾ ಇದೆ. ತುಮಕೂರು ನೀರು ಮುಟ್ಟುವ ಹಂತದಲ್ಲಿ ಇದೆ. ಪ್ರಾಜೆಕ್ಟ್ ಇರುವುದು ಎರಡು ತಿಂಗಳು ನೀರು ತೆಗೆಯುವುದಕ್ಕೆ.

ಕೆನಾಲ್ ಗೆಲ್ಲಾ ಬೋರ್ ಗಳನ್ನ ಹಾಕಿ ಬಿಡ್ತಾರೆ, ನೀರನ್ನ ತೆಗಿತಾರೆ. ಉತ್ತರ ಕರ್ನಾಟಕ ಭಾಗದಲ್ಲಿ 90 ಪರ್ಸೆಂಟ್ ನೀರು ಹೋಗುವುದರೊಳಗೆ ಸೈಫನ್ ಮಾಡ್ತಾ ಇದಾರೆ. ಅದಕ್ಕೆ ಏನಾದರೂ ಕ್ರಮ ತೆಗೆದುಕೊಳ್ಳಿ ಎನ್ನುತ್ತಾರೆ. ಅಲ್ಲಿನ ಅಧಿಕಾರಿಗಳು ಏನು ಮಾಡುವುದಕ್ಕೆ ಆಗಲ್ಲ. ಅಲ್ಲಿನ ಲೋಕಲ್ ಲೀಡರ್ಸ್, ನಾವುಗಳು ಒಂದು ತೀರ್ಮಾನ ಮಾಡಬೇಕು. ಚಾನೆಲ್ ಮಾಡಿದ್ದು ಯಾಕೆ. ನೀರು ಕೆಳಗಡೆ ತನಕ ಹರಿಯಬೇಕು. ನಾವು ಹಾಗೂ ಶಾಸಕರು ರೈತರಿಗೆ ಹೇಳಬೇಕು.

ಎಲ್ಲರೂ ಒಪ್ಪುವುದಾದರೆ ಅದನ್ನ ಹೇಗೆ ನಿಯಂತ್ರಣ ಮಾಡಬೇಕೆಂದು ನಾನು ಎಕ್ಸಾಮಿನ್ ಮಾಡಿದ್ದೀನಿ. ಆ ನೀರು 50 ಪರ್ಸೆಂಟ್ ಕೂಡ ಹೋಗಿಲ್ಲ ಅಂದ್ರೆ ನಾವೂ ಪ್ರಾಜೆಕ್ಟ್ ಮಾಡಿ ಏನು ಸುಖ. ನೀರನ್ನ ಲಿಫ್ಟ್ ಮಾಡ್ತಾ ಇದ್ದೀವಿ. ಇವ್ರು ನೀರನ್ನ ಚಾನೆಲ್ ನಿಂದ ಲಿಫ್ಟ್ ಮಾಡಿಕೊಂಡು ಹತ್ತತ್ತು ಕಿಲೋ ಮೀಟರ್ ತೆಗೆದುಕೊಂಡು ಹೋದ್ರೆ ಯಾವ ರೈತರಿಗೆ ಅನುಕೂಲವಾಗುತ್ತೆ. ನಾವೂ ಇದನ್ನ ಗಮನ ಹರಿಸುತ್ತೇವೆ. ಇನ್ನೊಂದು ವಾರದಲ್ಲಿಯೇ ಅದಕ್ಕೆ ಬಿಲ್ ತರುತ್ತೇನೆ. ಚರ್ಚೆ ಮಾಡೋಣಾ. ನೀವೂ ಒಪ್ಪಿಗೆ ಕೊಟ್ಟರೆ ಅದನ್ನ ಮುಂದುವರೆಸೋಣಾ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...