Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲಿ ‘ಲೂಟಿಕೋರ’ ಪದದ ಗದ್ದಲ : ಏಕವಚನದಲ್ಲಿಯೇ ಬೈದಾಡಿದ ಬಿಜೆಪಿ-ಕಾಂಗ್ರೆಸ್ ನಾಯಕರು..!

Facebook
Twitter
Telegram
WhatsApp

 

ಬೆಂಗಳೂರು: ಇಂದು ಅಧಿವೇಶನದ ಎರಡನೇ ದಿನ, ಅಭಿವೃದ್ಧಿ, ಚರ್ಚೆ, ಮಾತುಕತೆಗಳು ಮುಂದುವರೆದಿವೆ. ಅದರಲ್ಲೂ ಆಡಳಿತ ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಲೂಟಿಕೋರ ಎಂಬ ಪದ ಜೋರು ಗದ್ದಲವನ್ನೇ ಉಂಟು ಮಾಡಿದೆ‌. ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿವಾಗ ಲೂಟಿಕೋರ ಎಂಬ ಪದವನ್ನು ಬಳಕೆ ಮಾಡಿದ್ದಾರೆ. ತಕ್ಷಣ ಅದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ‌.

 

ಇತ್ತ ಕಾಂಗ್ರೆಸ್ ನಾಯಕರು ಒಗ್ಗೂಡಿದ್ದು, ಗೃಹ ಸಚಿವ ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಸೇರಿದಂತೆ ಕಾಂಗ್ರೆಸ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೇನೆ ಬೆಂಬಲ ನೀಡಿದ್ದಾರೆ. ಬಿಜೆಪಿ ನಾಯಕರಿಗೆ ಮಾತಿನಲ್ಲಿಯೇ ತಿರುಗೇಟು ನೀಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷದ ನಾಯಕರು ಒಟ್ಟೊಟ್ಟಿಗೆ ಮಾತಾನಡುತ್ತಿದ್ದ ಕಾರಣ, ಯಾರು, ಯಾರಿಗೆ ಏನನ್ನು ಹೇಳಿದರು ಎಂಬುದೇ ಅರ್ಥವಾಗಲಿಲ್ಲ. ಆದರೂ ಜಗಳವಾಡಿದ್ದಂತೂ ಸ್ಪಷ್ಟವಾಗಿತ್ತು.

ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಅಶ್ವತ್ಥ್ ನಾರಾಯಣ್ ಇಬ್ಬರು ಏಕವಚನದಲ್ಲಿಯೇ ಬೈದಾಡಿಕೊಂಡರು. ನೀನೇ ಲೂಟೊಕೋರ ಎಂದು ಡಿಕೆಶಿ ಹೇಳಿದರೆ, ಯಾವುದನ್ನು ಲೂಟಿ ಹೊಡೆದಿದ್ದೀನಿ. ಎಲ್ಲರದನ್ನು ಸರಿಯಾಗಿ ಹೇಳಿದರೆ ನಮಗೂ ಸಂತೋಷವೇ ಅಂತ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು. ಡಿಕೆಶಿ ಕೋಪದಲ್ಲಿ ಮಾತನಾಡುತ್ತಿದ್ದರೆ ಆ ಕಡೆಯಿಂದ ಬಿಜೆಪಿ ನಾಯಕರು ಇನ್ನಷ್ಟು ಕೋಪ ತರಿಸುವಂತೆ, ಟ್ರಿಗರ್ ಮಾಡುವ ರೀತಿ ನಗು ನಗುತ್ತಾ ಪ್ರಶ್ನೆಗಳನ್ನು ಕೇಳುತ್ತಿದ್ದರು‌. ಇವತ್ತಿನ ಸದನದಲ್ಲಿ ಆರಂಭದಲ್ಲಿಯೇ ಲೂಟಿಕೋರ ಪದ ಜೋರು ಸದ್ದು ಗದ್ದಲ ಮಾಡಿದೆ. ಕೆಲವೊಂದು ಸಮಸ್ಯೆಗಳ ಚರ್ಚೆಯೂ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!