Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಸಂಭ್ರಮದ ಮೊಹರಂ : ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 17 : ಜಾತಿ ಧರ್ಮದ ಕಟ್ಟುಪಾಡುಗಳನ್ನು ಮೀರಿ ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ನಗರದಲ್ಲಿ ಬುಧವಾರ ನಡೆಯಿತು.

ದುಃಖ, ಬಲಿದಾನ, ಶೋಕಾಚರಣೆಯ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಗಾಯ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ. ಅದಕ್ಕಾಗಿಯೇ ಮೊಹರಂ ಹಬ್ಬಕ್ಕೆ ತನ್ನದೆ ಆದ ಮಹತ್ವವಿದೆ. ಒಂಬತ್ತು ದಿನಗಳ ಕಾಲ ಆಚರಿಸುವ ಮೊಹರಂ ಹಬ್ಬದ ಕೊನೆ ಹತ್ತನೆ ದಿನವೇ ಪಂಜ ಮೆರವಣಿಗೆ ಹೊರಡುತ್ತದೆ. ಉಪವಾಸ ಆಚರಿಸುವ ಸಂಕಲ್ಪ ಮಾಡುವುದು ಹಬ್ಬದ ವಿಶೇಷ.

ಚೇಳುಗುಡ್ಡ, ಬುರುಜನಹಟ್ಟಿ, ಮಠದಕುರುಬರಹಟ್ಟಿಯಿಂದ ಮೆರವಣಿಗೆ ಮೂಲಕ ಬಂದ ಪಂಜಗಳು ಸೈಯದ್ ನಾ ಹಜರತ್ ಇಮಾಂ ಹಸ ಸೈಯದಾನಾ, ಹಜರತ್ ಇಮಾಂ ಹುಸೇನ್ ಅಶೋರಖಾನ ಇವರುಗಳ ದರ್ಗಾ ಬಳಿ ತೆರಳಿ ಪೂಜೆ ಸಲ್ಲಿಸಿದವು. ಗಾಂಧಿವೃತ್ತದಿಂದ ಹಿಡಿದು ದೊಡ್ಡಪೇಟೆಯವರೆಗೆ ರಸ್ತೆಯ ಎರಡು ಬದಿಗಳಲ್ಲಿ ಹಿಂದೂ-ಮುಸಲ್ಮಾನರು ಜಮಾಯಿಸಿ ಮೆರವಣಿಗೆ ವೀಕ್ಷಿಸಿದರು. ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದ ಯುವಕರು ಡೊಳ್ಳು ತಮಟೆಗಳನ್ನು ಬಾರಿಸಿ ಕುಣಿದು ಕುಪ್ಪಳಿಸುತ್ತಿದ್ದುದು ಕಂಡು ಬಂದಿತು.

ಬೃಹದಾಕಾರವಾದ ಹಾರ, ಹೂವು ಮತ್ತು ಸುನೇರಿಗಳಿಂದ ಅಲಂಕರಿಸಿದ್ದ ಪಂಜಗಳ ಮೇಲೆ ಜನ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸುತ್ತಿದ್ದರೆ ಇನ್ನು ಕೆಲವರು ಕೆಳಗೆ ಬಿದ್ದ ಮಂಡಕ್ಕಿಗಳನ್ನು ಆಯ್ದುಕೊಳ್ಳುತ್ತಿದ್ದುದು ಮೊಹರಂ ಹಬ್ಬದ ವಿಶೇಷವಾಗಿತ್ತು. ದರ್ಗಾಕ್ಕೆ ತೆರಳಿದ ಭಕ್ತರ ತಲೆಯ ಮೇಲೆ ನವಿಲುಗರಿಗಳನ್ನು ಮುಟ್ಟಿಸಲಾಗುತ್ತಿತ್ತು.
ದೊಡ್ಡಪೇಟೆ ಹಾಗೂ ಗಾಂಧಿವೃತ್ತದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!