Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ ಸರ್ಕಾರ..!

---Advertisement---

 

ಬೆಂಗಳೂರು: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇಕಡ 75 ರಷ್ಟು ಮೀಸಲಾತಿ‌ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಹಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಕನ್ನಡಿಗರು ತುಂಬಾನೇ ಖುಷಿ ಪಟ್ಟಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ರಾಜ್ಯ ಸರ್ಕಾರ ಈ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

ಈ ಯೋಜನೆ ಹಲವು ದಿನಗಳಿಂದ ಕನ್ನಡಿಗರ ಆಸೆಯಾಗಿತ್ತು. ಎಷ್ಟೇ ಹೋರಾಟ ಮಾಡಿದರೂ ಅದು ಸಾಧ್ಯವಾಗಿರಲಿಲ್ಲ. ಟ್ವಿಟ್ಟರ್ ಅಭಿಯಾನಗಳು ನಡೆದು ಹೋಗಿದ್ದವು. ಆದರೆ ಈ ಬಾರಿ‌ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಕನಸನ್ನು‌ ನನಸು ಮಾಡುವುದಕ್ಕೆ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ತಡೆ ಹಿಡಿದಿದೆ‌. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಪರಾಮರ್ಶಿಸಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆ ಸೇರಿದಂತೆ ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿತ್ತು. ಆದರೆ ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಉದ್ಯಮಿಗಳಿಂದ ಬಾರೀ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಮಸೂದೆಗೆ ಟಿ.ವಿ.ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ಫೋಸಿಸ್ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿರುವ ಅವರು, ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದರೆ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ವೆಚ್ಚ ಮಾಡಲಿ. ಕನ್ನಡಿಗರಿಗೆ ಉದ್ಯೋಗಕ್ಕೆ ಸೂಕ್ತ ತರಬೇತಿ ನೀಡಲಿ. ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಹಣವನ್ನು ರಾಜ್ಯ ಸರ್ಕಾರ ವೆಚ್ಚ ಮಾಡಲಿ. ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಕಾನೂನು ಮಾಡಿವುದು ಸರಿಯಲ್ಲ ಅಂತ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು. ಕಿರಣ್ ಮಜುಂದಾರ್ ಕೂಡ ಆಕ್ಷೇಪ ವ್ಯಕ್ಯಪಡಿಸಿದ್ದರು. ವಿರೋಧದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment