Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಜವಾಗಿದೆ ಹಾರ್ದಿಕ್ ಪಾಂಡ್ಯಾ ಬಗ್ಗೆ ಹಬ್ಬಿದ್ದ ಗಾಳಿ ಸುದ್ದಿ : ಡಿವೋರ್ಸ್ ಸುದ್ದಿ ಒಪ್ಪಿಕೊಂಡ ಆಟಗಾರ

Facebook
Twitter
Telegram
WhatsApp

ಕಳೆದ ಕೆಲವು ತಿಂಗಳಿನಿಂದ ಹಾರ್ದಿಕ್ ಪಾಂಡ್ಯಾ ಹಾಗೂ ನಟಾಶ ನಡುವೆ ಏನು ಸರಿ ಇಲ್ಲ ಎಂಬಂತ ವಿಚಾರ ಸುದ್ದಿಯಲ್ಲಿತ್ತು. ಇಬ್ಬರು ದೂರವಾಗ್ತಾ ಇದ್ದಾರೆ ಎಂಬ ಮಾತು ಕೇಳಿ ಬರುತ್ತಾ ಇತ್ತು. ಇದೀಗ ಪಾಂಡ್ಯಾ ಬದುಕಲ್ಲಿ ಬೀಸಿದ್ದ ಬಿರುಗಾಳಿ ಸತ್ಯವಾಗಿದೆ. ಹಾರ್ದಿಕ್ ಪಾಂಡ್ಯಾ ತಮ್ಮ ಡಿವೋರ್ಸ್ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.

 

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ಬ್ಯುಯಿ ಇದ್ದಾಗಲೇ ಈ ಥರದ ವಿಚಾರ ಸುದ್ದಿಯಾಗಿತ್ತು. ಹಾರ್ದಿಕ್ ಪಾಂಡ್ಯ ಹಾಗೂ ನಟಾಶ ಬೇರೆ ಬೇರೆ ವಾಸ ಮಾಡುತ್ತಿದ್ದಾರೆ. ಡಿವೋರ್ಸ್ ಬಗ್ಗೆ ಘೋಷಣೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ವಿಶ್ವಕಪ್ ನಲ್ಲಿ ಅದ್ಭುತವಾಗಿ ಆಟ ಪ್ರದರ್ಶನ ಮಾಡಿದಾಗಲೂ ಹೆಂಡತಿ ಬಂದಿರಲಿಲ್ಲ. ಮನೆಗೆ ಬಂದು ಅದ್ದೂರಿಯಾಗಿ ಆಚರಣೆ ಮಾಡಿದಾಗಲು ಹೆಂಡತಿಯ ಸುಳಿವಿರಲ್ಲ. ಬರೀ ಮಗನ ಜೊತೆಗೇನೆ ಫೋಟೋ ಹಾಕಿದ್ದರು. ಆಗಲೂ ಇಬ್ಬರು ದೂರ ದೂರ ಎಂಬ ಸುದ್ದಿ ಹಬ್ಬಿತ್ತು.

ಈ ಬಗ್ಗೆ ಹಾರ್ದಿಕ್ ಪಾಂಡ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, 4 ವರ್ಷಗಳ ಒಟ್ಟಿಗೆ ಬಾಳಿದ ನಂತರ, ನಟಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ಒಟ್ಟಾಗಿ ಬಾಳಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ನಮ್ಮಿಬ್ಬರ ಹಿತದೃಷ್ಟಿಯಿಂದ, ನಾವು ಒಟ್ಟಾಗಿ ಅನುಭವಿಸಿದ ಸಂತೋಷ, ಪರಸ್ಪರ ಗೌರವ, ಒಡನಾಟ ಮತ್ತು ನಾವು ಕುಟುಂಬವಾಗಿ ಬೆಳೆದ ರೀತಿಯನ್ನ ನೋಡಿದಾಗ ಇದು ನಮಗೆ ಕಠಿಣ ನಿರ್ಧಾರವಾಗಿತ್ತು. ನಮ್ಮ ಮಗ ಅಗಸ್ತ್ಯ ಇಬ್ಬರ ಜೀವನದಲ್ಲೂ ಇನ್ಮುಂದೆ ಇರಲಿದ್ದಾನೆ. ಅವನ ಸಂತೋಷಕ್ಕಾಗಿ ನಾವು ಅವನಿಗೆ ಸಾಧ್ಯವಿರುವ ಎಲ್ಲವನ್ನೂ ನೀಡುವ ಪೋಷಕರಾಗಿರುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!