Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಜವಾಗಿದೆ ಹಾರ್ದಿಕ್ ಪಾಂಡ್ಯಾ ಬಗ್ಗೆ ಹಬ್ಬಿದ್ದ ಗಾಳಿ ಸುದ್ದಿ : ಡಿವೋರ್ಸ್ ಸುದ್ದಿ ಒಪ್ಪಿಕೊಂಡ ಆಟಗಾರ

---Advertisement---

ಕಳೆದ ಕೆಲವು ತಿಂಗಳಿನಿಂದ ಹಾರ್ದಿಕ್ ಪಾಂಡ್ಯಾ ಹಾಗೂ ನಟಾಶ ನಡುವೆ ಏನು ಸರಿ ಇಲ್ಲ ಎಂಬಂತ ವಿಚಾರ ಸುದ್ದಿಯಲ್ಲಿತ್ತು. ಇಬ್ಬರು ದೂರವಾಗ್ತಾ ಇದ್ದಾರೆ ಎಂಬ ಮಾತು ಕೇಳಿ ಬರುತ್ತಾ ಇತ್ತು. ಇದೀಗ ಪಾಂಡ್ಯಾ ಬದುಕಲ್ಲಿ ಬೀಸಿದ್ದ ಬಿರುಗಾಳಿ ಸತ್ಯವಾಗಿದೆ. ಹಾರ್ದಿಕ್ ಪಾಂಡ್ಯಾ ತಮ್ಮ ಡಿವೋರ್ಸ್ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.

 

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ಬ್ಯುಯಿ ಇದ್ದಾಗಲೇ ಈ ಥರದ ವಿಚಾರ ಸುದ್ದಿಯಾಗಿತ್ತು. ಹಾರ್ದಿಕ್ ಪಾಂಡ್ಯ ಹಾಗೂ ನಟಾಶ ಬೇರೆ ಬೇರೆ ವಾಸ ಮಾಡುತ್ತಿದ್ದಾರೆ. ಡಿವೋರ್ಸ್ ಬಗ್ಗೆ ಘೋಷಣೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ವಿಶ್ವಕಪ್ ನಲ್ಲಿ ಅದ್ಭುತವಾಗಿ ಆಟ ಪ್ರದರ್ಶನ ಮಾಡಿದಾಗಲೂ ಹೆಂಡತಿ ಬಂದಿರಲಿಲ್ಲ. ಮನೆಗೆ ಬಂದು ಅದ್ದೂರಿಯಾಗಿ ಆಚರಣೆ ಮಾಡಿದಾಗಲು ಹೆಂಡತಿಯ ಸುಳಿವಿರಲ್ಲ. ಬರೀ ಮಗನ ಜೊತೆಗೇನೆ ಫೋಟೋ ಹಾಕಿದ್ದರು. ಆಗಲೂ ಇಬ್ಬರು ದೂರ ದೂರ ಎಂಬ ಸುದ್ದಿ ಹಬ್ಬಿತ್ತು.

ಈ ಬಗ್ಗೆ ಹಾರ್ದಿಕ್ ಪಾಂಡ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, 4 ವರ್ಷಗಳ ಒಟ್ಟಿಗೆ ಬಾಳಿದ ನಂತರ, ನಟಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ಒಟ್ಟಾಗಿ ಬಾಳಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ನಮ್ಮಿಬ್ಬರ ಹಿತದೃಷ್ಟಿಯಿಂದ, ನಾವು ಒಟ್ಟಾಗಿ ಅನುಭವಿಸಿದ ಸಂತೋಷ, ಪರಸ್ಪರ ಗೌರವ, ಒಡನಾಟ ಮತ್ತು ನಾವು ಕುಟುಂಬವಾಗಿ ಬೆಳೆದ ರೀತಿಯನ್ನ ನೋಡಿದಾಗ ಇದು ನಮಗೆ ಕಠಿಣ ನಿರ್ಧಾರವಾಗಿತ್ತು. ನಮ್ಮ ಮಗ ಅಗಸ್ತ್ಯ ಇಬ್ಬರ ಜೀವನದಲ್ಲೂ ಇನ್ಮುಂದೆ ಇರಲಿದ್ದಾನೆ. ಅವನ ಸಂತೋಷಕ್ಕಾಗಿ ನಾವು ಅವನಿಗೆ ಸಾಧ್ಯವಿರುವ ಎಲ್ಲವನ್ನೂ ನೀಡುವ ಪೋಷಕರಾಗಿರುತ್ತೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment