Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀಘ್ರದಲ್ಲಿಯೇ ನಡೆಯಲಿದೆ ಅಂಗನವಾಡಿ ಶಿಕ್ಷಕರ ನೇಮಕಾತಿ..!

Facebook
Twitter
Telegram
WhatsApp

ಬೆಂಗಳೂರು: ಇಂದಿನ ವುಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಸುತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶೀಘ್ರವೇ ಅಂಗನವಾಡಿ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ‌. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಒಳಗೊಂಡ ಜಿಲ್ಲಾಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ. ಅಂಗನವಾಡಿಯ ಮೂಲ ಉದ್ದೇಶವೆ ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಖಿಕವಾಗಿ ಈ ಸಂಬಂಧ ಆದೇಶ ನೀಡಿದ್ದಾರೆ. ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.

2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೃಷ್ಟಿ ಎಂಬ ಯೋಜನೆಯನ್ನು ಆರಂಭಿಸಿದ್ದರು. ಆ‌ ಮೂಲಕ ಪೌಷ್ಠಿಕ ಆಹಾರ ನೀಡುವುದಕ್ಕೆ ಮೊಟ್ಟೆ ನೀಡುವುದಕ್ಕೆ ತೀರ್ಮಾನಿಸಿದರು. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳು ಇದಾವೆ. ಈ ಪೈಕಿ ಕೆಲವೊಂದು ಕೇಂದ್ರಗಳಲ್ಲಿ ಸಮಸ್ಯೆಗಳು ಬಂದಿದ್ದವು. ಇದರ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ ಎಂದಿದ್ದಾರೆ. ಈ ಮೂಲಕ ಅಂಗನವಾಡಿ ಶಿಕ್ಷಕರ ನೇಮಕಾತಿಯ ಬಗ್ಗೆ ಸುಳಿವು ನೀಡಿದ್ದಾರೆ.

ಕೆಲಸಕ್ಕಾಗಿ ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯಂತು ಸಿಕ್ಕಿದೆ. ಆದಷ್ಟು ಬೇಗ ನೇಮಕಾತಿ ಮಾಡಿಕೊಂಡರೆ ಸಾಕು ಎಂದೇ ಅರ್ಜಿ ಸಲ್ಲಿಕೆ ಮಾಡಿದವರು ಕಾಯುತ್ತಿದ್ದಾರೆ. ಇನ್ನು ಅಂಗನವಾಡಿಯ ಮಕ್ಕಳಿಗೆ ಪೌಷ್ಠಿಕಾಂಶದ ಕಡೆಗೂ ಸರ್ಕಾರ ಗಮನ ಕೊಡುತ್ತದೆ. ಪ್ರಶ್ನೋತ್ತರದ ವೇಳೆ ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!