Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಮದುವೆಗೆ ದರ್ಶನ್ ಬರ್ತಾರೆ : ಜೈಲಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟ ತರುಣ್ ಸುಧೀರ್

Facebook
Twitter
Telegram
WhatsApp

 

 

ಬೆಂಗಳೂರು: ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಮದುವೆಯಾಗುತ್ತಿದ್ದಾರೆ. ಸದ್ಯ ಸ್ಯಾಂಡಲ್ ವುಡ್ ನಲ್ಲೆಲ್ಲಾ ಇದರದ್ದೇ‌ ಸುದ್ದಿ. ನಟಿ ಸೋನಲ್ ಜತೆಗೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗಾಗಲೇ ಅವರ ತಾಯಿ ಮಾಲತಿ ಸುಧೀಂದ್ರ ಅವರು ಸೊಸೆಯ ಬಗ್ಗೆ ಎಲ್ಲಾ ಚಾನೆಲ್ ಗಳಲ್ಲೂ ಮಾತನಾಡಿದ್ದಾರೆ. ತರುಣ್ ಸುಧೀರ್ ಕೂಡ ಹೌದು ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಮದುವೆ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿವೆ.

ಲಗ್ನಪತ್ರಿಕೆ ಹಂಚುವುದಕ್ಕೆ ಶುರು ಮಾಡಿರುವ ತರುಣ್ ಸುಧೀರ್,‌ಮೊದಲ ಪತ್ರಿಕೆಯನ್ನು ದರ್ಶನ್ ಅವರುಗೆ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಪತ್ರಿಕೆ ಕೊಟ್ಟು ಬಂದಿದ್ದಾರೆ. ಈ ವೇಳೆ ಮಾತನಾಡಿದ ತರುಣ್ ಸುಧೀರ್, ನಟ ದರ್ಶನ್ ಅವರುಗೆ ಹುಷಾರು ಇರಲಿಲ್ಲ. ಈಗ ಚೆನ್ನಾಗಿದ್ದಾರೆ. ಈಗಿನ ವಾತಾವರಣದಿಂದ ಜ್ವರ ಬಂದಿತ್ತು. ಯಾವಾಗಲೂ ನನ್ನನ್ನು ನೋಡಿ ಹೇಗೆ ರಿಯಾಕ್ಟ್ ಮಾಡುತ್ತಿದ್ದರೋ ಅದೇ ರೀತಿ ಇವತ್ತು ರಿಯಾಕ್ಟ್ ಮಾಡಿದ್ದಾರೆ‌. ಅವರಿಗಿಂತ ಹೆಚ್ಚು ವೀಕ್ ಆಗಿಬಿಟ್ಟಿದ್ದೀವಿ ನಾವೂ. ಹುಷಾರಿಲ್ಲದರ ಬಗ್ಗೆ ಚರ್ಚೆ ಮಾಡಿದಾಗ, ಏನಿಲ್ಲ ಮಗನೇ ಆರಾಮವಾಗಿ ಇದ್ದೀನಿ ಅಂದಿದ್ದಾರೆ. ನನ್ನ ಮದುವೆ ಬಗ್ಗೆ ದರ್ಶನ್ ಅವರಿಗೆ ಮೊದಲೇ ಗೊತ್ತಿತ್ತು. ದರ್ಶನ್ ಅವರು ಇಲ್ಲದೆ ಮದುವೆ ಆಗುವ ಕೊರಗು ಇತ್ತು.

ನಿಗದಿತ ದಿನಾಂಕದಂದೇ ಮದುವೆ ಆಗುವುದಕ್ಕೆ ಹೇಳಿದರು. ಅಷ್ಟರೊಳಗೆ ನಾನು ಬರ್ತೀನಿ ಎಂದಿದ್ದಾರೆ. ಅವರು ಏನು ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲಿ ನಾವೆಲ್ಲ ಇದ್ದೇವೆ. ಅದು ಹಾಗೇ ಆಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ದರ್ಶನ್ ಅವರು ನನ್ನ ಮದುವೆ ಅಷ್ಟರಲ್ಲಿ ರಿಲೀಸ್ ಆಗ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

error: Content is protected !!