Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜುಲೈ 23ಕ್ಕೆ “ಸಾದ್ವಿ ಸರಸ್ವತಿ” ನಾಟಕ ಪ್ರದರ್ಶನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 20 : ಕನ್ನಡ ರಂಗಭೂಮಿ ಹಾಗೂ ಸಂಗೀತ ಕ್ಷೇತ್ರಕ್ಕೆ ನಾಲ್ಕು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಶ್ರೀಗುರು ವಾದ್ಯವೃಂದ ದಾವಣಗೆರೆ, ಮತ್ತು ಕನ್ನಡ ಕಲಾವಿದರ ಸಂಘ, ಬೆಳಗಾವಿ ಹಾಗೂ ಶ್ರೀ ಸಂಚಾರಿ ಕೆ.ಬಿ.ಆರ್. ಡ್ರಾಮಾ ಕಂಪನಿ ದಾವಣಗೆರೆ ಇವರ ಸಹಯೋಗದೊಂದಿಗೆ ನಗರದಲ್ಲಿ ಜು.23 ರ ಮಂಗಳವಾರ ಸಂಜೆ 06ಕ್ಕೆ ಚಿತ್ರದುರ್ಗದ  ತರಾಸು. ರಂಗಮಂದಿರದಲ್ಲಿ “ಸಾದ್ವಿ ಸರಸ್ವತಿ” ನಾಟಕ ಪ್ರದರ್ಶನ ಏರ್ಪಡಿಸಿದೆ.

ಈ ಸಮಾರಂಭದ ಸಾನಿಧ್ಯವನ್ನು ಶ್ರೀ ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿಯ ಪಟ್ಟಾಧ್ಯಕ್ಷರಾದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ವಹಿಸಲಿದ್ದಾರೆ.

ಚಿತ್ರದುರ್ಗದ ತಹಶೀಲ್ದಾರರಾದ ಶ್ರೀಮತಿ ಡಾ. ನಾಗವೇಣಿ, ಹೊಳಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಬಿ.ಬಿ. ಫಾತಿಮಾ, ಹಿರಿಯೂರಿನ ಪೋಲೀಸ್ ಉಪಅಧೀಕ್ಷಕರಾದ ಶ್ರೀಮತಿ ಚೈತ್ರಾ ಎಸ್. ನಗರಸಭೆ ಆಯುಕ್ತರಾದ ಶ್ರೀಮತಿ ಎಂ. ರೇಣುಕಾ, ಕೆ.ಡಿ.ಪಿ. ಸದಸ್ಯರಾದ ಕೆ.ಸಿ. ನಾಗರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ ಗೌಡಗೆರೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಹನುಮಂತಪ್ಪ, ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಎಸ್.ಪಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ಆರ್.ಟಿ.ಓ. ಭರತ್ ಎಮ್. ಕಾಳಸಿಂಗೆ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯ ದರ್ಶಿ ಡಿ.ಓ ಮುರಾರ್ಜಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಲಾವಿದರಾದ ಚಿಂದೋಡಿ ಶಂಭುಲಿಂಗಪ್ಪ ಶ್ರೀ ಸಂಚಾರಿ ಕೆ.ಬಿ.ಆರ್. ಡ್ರಾಮಾ ಕಂಪನಿಯ ಮಾಲೀಕರಾದ ಚಿಂದೋಡಿ ಶಂಭುಲಿಂಗಪ್ಪ ಆಗಮಿಸಲಿದ್ದಾರೆ.

ಸಮಾರಂಭದಲ್ಲಿ ಬೆಳಗಾವಿಯ ಕನ್ನಡ ಕಲಾವಿದರ ಸಂಘದ ಅಧ್ಯಕ್ಷರಾದ ಬಿ.ಕೆ. ಗಣೇಶ್‌ರನ್ನು ಸನ್ಮಾನಿಸಲಾಗುವುದು.ಈ ಸಮಾರಂಭದ ಅಂಗವಾಗಿ ಕರ್ನಾಟಕದ ಶ್ರೇಷ್ಠ ಕಲಾವಿದರಿಂದ “ಸಾದ್ವಿ ಸರಸ್ವತಿ” ನಾಟಕ ಪ್ರದರ್ಶನ ಅಬಿನಯಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!