Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ ಮಕ್ಕಳಿಗೆ ಇನ್ಮುಂದೆ ವಾರದಲ್ಲಿ 4 ದಿನ ಮೊಟ್ಟೆ : ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

 

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಅನುದಾನವೂ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ನಾನು ಈಗಷ್ಠೆ ಪ್ರತಿಷ್ಠಾನದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಬಂದಿದ್ದೇನೆ. ಮಕ್ಕಳಿಗೆ ಪ್ರತಿದಿನ ಒಂದು ಮೊಟ್ಟೆಯನ್ನು ವಾರದ ನಾಲ್ಕು ದಿನ ವಿತರಿಸಲಿದ್ದಾರೆ ಎಂದಿದ್ದಾರೆ. ಆದರೆ ಯಾವಾಗಿನಿಂದ ಈ ಕಾರ್ಯ ಆರಂಭವಾಗಬಹುದು ಎಂಬ ಬಗ್ಗೆ ಮಾತ್ರ ಮಾಹಿತಿ ನೀಡಲಿಲ್ಲ.

ಮಕ್ಕಳಿಗೆ ಬೇಕಾದ ಪೌಷ್ಠಿಕಾಂಶ ಒದಗಿಸಲು ಶಿಕ್ಷಣಾ‌ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯೊಂದಿಗೆ ಅಜಿಂ ಪ್ರೇಮ್ ಜೀ ಫೌಂಡೇಷನ್ ಕೈ ಜೋಡಿಸಿದೆ. ಇದಕ್ಕಾಗಿ 1,500 ಕೋಟಿ ದೇಣಿಗೆ ನೀಡಲು ಫೌಂಡೇಷನ್ ಮುಂದೆ ಬಂದಿದೆ. ಈಗಾಗಲೇ ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ನಡುವೆ ಈ ಸಂಬಂಧ ಔಪಚಾರಿಕ ಒಪ್ಪಂದಕ್ಕೆ ಸಹಿ ಬಿದ್ದಿದೆ. ಇನ್ಮುಂದೆ ಮಕ್ಕಳಿಗೆ ಬೇಕಾದ ಪೌಷ್ಠಿಕಾಂಶ ಈ ಮೂಲಕ ಸಿಗಲಿದೆ.

ಈಗ ಸದ್ಯಕ್ಕೆ 1 ರಿಂದ 10ನೇ ತರಗತಿಯಲ್ಲಿನ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆ ಹಣ್ಣನ್ನು ವಿತರಣೆ ಮಾಡಲಾಗುತ್ತಿತ್ತು. ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆಯ ಪ್ರಸ್ತಾಪ ಸರ್ಕಾರದ ಮುಂದೆ ಇತ್ತು. ಆದರೆ ಹಣದ ಕೊರತೆಯಿಂದಾಗಿ ಅದನ್ನು ಅನುಷ್ಠಾನಗೊಳಿಸಲು ಇಲಾಖೆಗೆ ಸಾಧ್ಯವಾಗಿರಲಿಲ್ಲ. ಇದೀಗ ಮಕ್ಕಳ ಆರೋಗ್ಯದ ವಿಚಾರಕ್ಕೆ ಅಜಿಂ ಪ್ರೇಮ್ ಜೀ ಫೌಂಡೇಷನ್ ಕೈ ಜೋಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment