Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆವರಣದಲ್ಲಿ ಕೀಟಜನ್ಯ ರೋಗಗಳು ಹರಡದಂತೆ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸಿ : ಡಾ.ಆನಂದ ಪ್ರಕಾಶ್

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ20:  ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶಪಡಿಸುವ ಚಟುವಟಿಕೆ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದಿಂದ ಹಮ್ಮಿಕೊಂಡಿದ್ದ ಲಾರ್ವಾ ಉತ್ಪತ್ತಿ ತಾಣ ನಾಶ ಕಾರ್ಯಕ್ಕೆ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್, ಎಲ್ಲ ಸರ್ಕಾರಿ ಕಚೇರಿಗಳ ಆವರಣದಲ್ಲಿ ಕೀಟಜನ್ಯ ರೋಗಗಳ ಹರಡದಂತೆ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವಂತೆ ಕರೆ ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಧಿಕಾರಿ ಡಾ.ಕಾಶಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಶುದ್ಧವಾದ ನೀರಿನಲ್ಲಿ ಬೆಳೆಯುವ ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿ ಡೆಂಗ್ಯೂ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ತಂಡ ರಚಿಸಿ ಜಿಲ್ಲಾಸ್ಪತ್ರೆ, ಸರ್ವೇಕ್ಷಣ ಘಟಕ, ತರಬೇತಿ ಕೇಂದ್ರ, ರಕ್ತ ನಿಧಿ ಕೇಂದ್ರ, ಸ್ಕ್ಯಾನಿಂಗ್ ಸೆಂಟರ್, ಔಷಧಿ ಉಗ್ರಾಣ, ಮೆಡಿಕಲ್ ಕಾಲೇಜು ಕಾಮಗಾರಿ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹಣೆ ನೀರನ್ನು ಖಾಲಿ ಮಾಡಿ ಲಾರ್ವಾಗಳನ್ನು ನಾಶಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಕೀಟ ಶಾಸ್ತ್ರಜ್ಞೆ ನಂದಿನಿ ಕಡಿ, ಕೀಟ ಜನ್ಯ ರೋಗಗಳ ವಿಭಾಗದ ಸುರೇಶ್ ಬಾಬು, ಮಲ್ಲಿಕಾರ್ಜುನ್ ಯೋಗೀಶ್ ಶ್ರೀನಿವಾಸ್. ಓ ಶ್ರೀನಿವಾಸ್.ವಿ.ನಾಗರಾಜ ಪಾಂಡು, ರುದ್ರಮುನಿ, ಕಾವ್ಯ, ಶ್ರೀಕಾಂತ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!