Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ವಿಜೃಂಭಣೆಯಿಂದ ನೆರವೇರಿದ ಗುರು ಪೌರ್ಣಮಿ ಮಹೋತ್ಸವ

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ಜುಲೈ. 21  : ತಾಲೂಕಿನ ಗುಯಿಲಾಳು ಟೋಲ್ ಬಳಿ ಇರುವ ಶ್ರೀ ಸದ್ಗುರು ಸಾಯಿ ದತ್ತಾಶ್ರಮದಲ್ಲಿ ಭಾನುವಾರ ಗುರು ಪೌರ್ಣಮಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಗುರು ಪೌರ್ಣಮಿ ಅಂಗವಾಗಿ ಸಾಯಿಮಂದಿರಲ್ಲಿ ಬೆಳಿಗ್ಗೆ ಗಂಗಾಪೂಜೆ ಯೊಂದಿಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ಶ್ರೀ ಬಾಬಾ ಅವರಿಗೆ ಅಭಿಷೇಕ, ಅಲಂಕಾರ ಪಂಚಾಮೃತ ಅಭಿಷೇಕ, ವ್ಯಾಸ ಪೂಜೆ, ಸದ್ಗುರು ಪೂಜೆ, ಕುಂಭಾಭಿಷೇಕ, ಸಂಜೆ ಆರತಿ, ಶ್ರೀ ಬಾಬಾರ ಪಾದಸ್ಪರ್ಶ, ಶೇಜ ಆರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಗುರು ಪೌರ್ಣಮಿ ಮಹೋತ್ಸವ ಅಂಗವಾಗಿ ಸಾಯಿ ದತ್ತಾಶ್ರಮದಲ್ಲಿ ವಿವಿಧ ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬಾಳೆ ಕಂದು, ಮಾವಿನ ತಳಿರು ತೋರಣಗಳಿಂದ ಅಲಂಕರಿಸಿದ್ದರು. ಶ್ರೀ ಸಾಯಿ ದತ್ತಾಶ್ರಮದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸಾವಿರಾರು ಭಕ್ತರು ಗುರು ಪೌರ್ಣಮಿ ಮಹೋತ್ಸವ ಪೂಜೆಯಲ್ಲಿ ಪಾಲ್ಗೊಂಡು ಬಾಬಾರ ದರ್ಶನ ಪಡೆದರು. ನೆರೆದಿದ್ದ ಭಕ್ತರಿಗೆ
ಅನ್ನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಹಿಳೆಯರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಹೆಚ್. ಆರ್. ತಿಮ್ಮಯ್ಯ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ. ಯಶೋಧರ, ಜೆಜೆ ಹಳ್ಳಿ ಮಂಜುನಾಥ್, ವಕೀಲ ಬಬ್ಬೂರು ಸುರೇಶ್, ಬಿ. ರಾಜಶೇಖರ್, ಶಿಡ್ವಯ್ಯನಕೊಟೆ ಮಲ್ಲಿಕಾರ್ಜುನಪ್ಪ, ಗಿಡ್ಡೊಬೆನಹಳ್ಳಿ ಅಶೋಕ್, ಆರನಕಟ್ಟೆ ಶಿವಕುಮಾರ್, ವೇದಾ ಶಿವಕುಮಾರ್, ರಾಜಣ್ಣ, ಚನ್ನಬಸವಣ್ಣ, ರಂಗಸ್ವಾಮಿ, ಗಂಗಾಧರ, ಸ್ಥಳೀಯ ಮೇಟಿಕುರ್ಕೆ ಗ್ರಾಮಸ್ಥರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!