Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಿ ಜುಲೈ 24 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಸಿರಿಗೆರೆಯ ತಣಿಗೆಹಳ್ಳಿ ಸಮೀಪ ಡಿ.ಮದಕರಿಪುರದ ಹತ್ತಿರವಿರುವ ಗಣಿಬಾಧಿತ ಪ್ರದೇಶಗಳ ಜನ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 52 ಲಾರಿಗಳೊಂದಿಗೆ ಕಾಲ್ನಡಿಗೆ ಜಾಥ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಲಿದ್ದಾರೆ.

ಜಿಲ್ಲಾ ಬಂಜಾರ ಲಂಬಾಣಿ ಸಮಾಜ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ, ವಾಲ್ಮೀಕಿ ಸೇನೆ ಹಾಗೂ ವಾಲ್ಮೀಕಿ ಜನಾಂಗದ ವತಿಯಿಂದ ಜಾನ್ ಮೈನ್ಸ್, ವೇದಾಂತ ಮೈನ್ಸ್‍ನವರು ತೋರುತ್ತಿರುವ ದರ್ಪದ ವಿರುದ್ದ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿರುವವರು ಮಂಗಳವಾರ ಬೆಳಿಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ ಹದಿನೈದು ಕಿ.ಮೀ. ಬಳಿಕ ರಾತ್ರಿ ಮಾರ್ಗ ಮಧ್ಯದಲ್ಲಿ ಎಲ್ಲಿಯಾದರೂ ತಂಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸೇರಿದ 52 ಲಾರಿಗಳನ್ನು ಜಾನ್ ಮೈನ್ಸ್ ಹಾಗೂ ವೇದಾಂತ ಮೈನ್ಸ್ ನವರು ಗಣಿಗಾರಿಕೆಗೆ ಬಳಸಿಕೊಂಡು ಈಗ ಏಕಾಏಕಿ ನಿಲ್ಲಿಸಿರುವುದರಿಂದ ಫೈನಾನ್ಸ್‍ಗಳಿಂದ ಸಾಲ ಪಡೆದಿರುವವರು ಇ.ಎಂ.ಐ. ಹಾಗೂ ಸಾಲಗಳನ್ನು ಕಟ್ಟಲಾಗದೆ ಬೀದಿಗೆ ಬಿದ್ದಿದ್ದಾರೆ. ಹೊರಗಿನಿಂದ ಕೆಲಸಗಾರರನ್ನು ಕರೆಸಿಕೊಂಡಿರುವ ಎರಡು ಮೈನ್ಸ್‌ ನವರು ಸ್ಥಳೀಯರಿಗೆ ಏಕೆ ಕೆಲಸ ಕೊಡುತ್ತಿಲ್ಲ ಎಂದು ಪ್ರತಿಭಟನಾನಿರತರು ಪ್ರಶ್ನಿಸುತ್ತಿದ್ದಾರೆ.

ಬಂಜಾರ ಲಂಬಾಣಿ ಸಮಾಜದ ಜಿಲ್ಲಾಧ್ಯಕ್ಷ ಎಸ್.ಸತೀಶ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ಮದಕರಿನಾಯಕ ಯುವಸೇನೆಯ ರಾಜಣ್ಣ, ತಿಪ್ಪೇಶಿ, ಸುಂದರಮೂರ್ತಿ, ರಘು, ಉಮಾಪತಿ, ತಿಪ್ಪೇಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...