Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಸಹಜ ಲೈಂಗಿಕ ಕ್ರಿಯೆ ಪ್ರಕರಣ : ಸೂರಜ್ ರೇವಣ್ಣನಿಗೆ ಷರತ್ತು ಬದ್ಧ ಜಾಮೀನು

Facebook
Twitter
Telegram
WhatsApp

 

ಬೆಂಗಳೂರು: ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದ ಮೇಲೆ ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಪೊಲೀಸರು ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣದ ತನಿಖೆ ನಡೆಸುತ್ತಿದ್ದರು. ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

*ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು.

* ಯಾವುದೇ ಕಾರಣಕ್ಕೂ ಅರ್ಜಿದಾರರು ಸಂತ್ರಸ್ತನನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು.

* ತಿಂಗಳ ಪ್ರತಿ ಎರಡನೇ ಭಾನುವಾರ ಹಾಗೂ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಐಒ ಮುಂದೆ ಹಾಜರಾಗಬೇಕು.

* ಆರು ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವುದರೊಳಗೆ ಅರ್ಜಿದಾರ ಇದೇ ರೀತಿಯ ಅಪರಾಧವನ್ನು ಮಾಡುವಂತೆ ಇಲ್ಲ.

ಹೀಗೆ ಷರತ್ತುಗಳನ್ನು ವಿಧಿಸಿ, ನ್ಯಾಯಾಲಯವೂ ಜಾಮೀನು ನೀಡಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವೂ ಜಾಮೀನು ಅರ್ಜಿಯನ್ನು ಈ ಹಿಂದೊಮ್ಮೆ ವಜಾಗೊಳಿಸಿತ್ತು. ಇದೀಗ ಜನಪ್ರತಿನಿಧಿಗಳಿಂದ ಷರತ್ತು ಬದ್ದ ಜಾಮೀನು ಸಿಕ್ಕಿದೆ.

ಸೂರಜ್ ರೇವಣ್ಣ ತಮ್ಮದೇ ಪಕ್ಷದ ಕಾರ್ಯಕರ್ತ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದರು ಎನ್ನಲಾಗಿದೆ. ಆತನ ನಂಬರ್ ತೆಗೆದುಕೊಂಡು ಅಸಭ್ಯವಾದ ಮೆಸೇಜ್ ಮಾಡುತ್ತಾ, ಒಮ್ಮೆ ಭೇಟಿಗೆಂದು ಕರೆದು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದರು ಎನ್ನಲಾಗಿದೆ. ಜೆಡಿಎಸ್ ಕಾರ್ಯಕರ್ತ ಈ ಸಂಬಂಧ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಸೂರಜ್ ರೇವಣ್ಣ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಇದೀಗ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಕೂಡ ಒಂದಷ್ಟು ದಿನ ಜೈಲಲ್ಲಿ ಇದ್ದು ಬಂದಿದ್ದರು. ಇನ್ನು ಪ್ರಜ್ವಲ್ ರೇವಣ್ಣರಿಗೆ ಜಾಮೀನು ಸಿಗಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!