ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದೆಹಲಿ: ರಾಜ್ಯದಲ್ಲಿ ಮಳೆ ಚೆನ್ನಾಗಿ ಬರುತ್ತಿದೆ. ಎಷ್ಟೋ ಕಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ರಸ್ತೆಗಳೇ ನಾಪತ್ತೆಯಾಗಿವೆ. ಡ್ಯಾಂಗಳಿಗೂ ಉತ್ತಮವಾಗಿ ನೀರು ಬಂದಿದ್ದು, ಜುಲೈ 27ಕ್ಕೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಹೀಗಾಗಿ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಭೆ ನಡೆಸಿದರು, ಪರಿಶೀಲನೆ ಮಡೆಸಿದರು. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಇಂದು ಡ್ಯಾಂಗಳೆಲ್ಲಾ ತುಂಬಿರುವುದು ಡಿಕೆ ಶಿವಕುನಾರ್ ಅವರಿಂದಾನೇ. ಗಂಗಾ ಆರತಿ ರೀತಿಯಲ್ಲಿ ಕಾವೇರಿ ಆರತಿ ಮಾಡಿದರೆ ಒಳ್ಳೆಯ ವಿಚಾರ. 5-6 ದಿನದಿಂದ ತಮಿಳುನಾಡಿಗೆ 5&6 ಟಿಎಂಸಿ ನೀರು ಹೋಗ್ತಿದೆ. ಜೂನ್ – ಜುಲೈ ತಿಂಗಳಿನ ಪಾಲಿಗಿಂತ ಹೆಚ್ಚು ನೀರು ಹೋಗಿದೆ. ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೂ ನಾನು ಹೇಳಿದ್ದು ಇಷ್ಟೆ. ತಮಿಳುನಾಡಿನ ಸಿಎಂ ಕರ್ನಾಟಕ ಪಾಲಿನ ನಡೆಯನ್ನು ತಿದ್ದುಕೊಳ್ಳಲಿ. ಕರ್ನಾಟಕ, ತಮಿಳುನಾಡಿಗೆ ಯಾವತ್ತು ಸಮಸ್ಯೆ ಮಾಡಿಲ್ಲ.
ನೀರು ಬಳಕೆ ಮಾಡುವ ದೃಷ್ಟಿಯಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಬೇಕು. ರಾಜ್ಯ ಸರ್ಕಾರ ಚಿಲ್ಲೃ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರದ ಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇನ್ನು ರಾಜ್ಯದಲ್ಲಿ ಬೆಂಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅನಾಹುತವನ್ನೇ ಸೃಷ್ಟಿಸಿವೆ. ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೂ ತಾಪತ್ರಯವಾಗುತ್ತಿದೆ. ಈ ಸಮಸ್ಯೆಯ ನಡುವೆಯೂ ಡ್ಯಾಂಗಳೆಲ್ಲಾ ತುಂಬುತ್ತಿದ್ದು, ಬೆಳೆಗೆ ನೀರು ಸಿಗುತ್ತಿದೆ ಎಂಬ ಸಂತಸ ರೈತರ ಮೊಗದಲ್ಲಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್