Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೊಜನೆಯಡಿ ಚಿತ್ರದುರ್ಗ ಜಿಲ್ಲೆಯ 29 ಕೆರೆಗಳ ಪುನಶ್ಚೇತನ :  ಮಹಾಯಾನ ಪುಸ್ತಕ ಜಿಲ್ಲಾಧಿಕಾರಿಗೆ ಸಮರ್ಪಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 23  : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೊಜನೆಯ ಟ್ರಸ್ಟಿ ಶ್ರೀಮತಿ ಹೇಮಾವತಿ ಹೆಗ್ಡೆರವರ ಕನಸಿನಂತೆ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಒಟ್ಟು 29 ಕೆರೆಗಳ ಹೂಳು ತೆಗೆಸಿ ಪುನಶ್ಚೇತನಗೊಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮಹಾಯಾನ ಪುಸ್ತಕವನ್ನು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ವಿತರಿಸಲಾಯಿತು.

ಕೆರೆಗಳ ಹೂಳು ತೆಗೆಸುವುದರಿಂದ ಮಳೆಗಾಲದಲ್ಲಿ ನೀರಿನ ಸಂಗ್ರಹ ಜಾಸ್ತಿಯಾಗುವುದಲ್ಲದೆ. ಕೃಷಿಗೆ ನೆರವಾಗಿ ಬೋರ್‍ವೆಲ್‍ಗಳಲ್ಲಿ ನೀರಿನ ಮಟ್ಟ ಹೆಚ್ಚಲಿದೆ. ಕೆರೆಯ ಫಲವತ್ತಾದ ಹೂಳನ್ನು ರೈತರು ತಮ್ಮ ಜಮೀನುಗಳಿಗೂ ಬಳಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಒಟ್ಟು 776 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಸುಮಾರು 208 ಲಕ್ಷ ಕ್ಯೂ.ಮೀಟರ್‍ನಷ್ಟು ಹೂಳು ತೆಗೆಯಲಾಗಿದೆ. ಒಂದು ಲಕ್ಷ ಎಪ್ಪತ್ತು ಸಾವಿರದ 23 ರೈತರು ಹೊಲಗಳಿಗೆ ಕೆರೆ ಮಣ್ಣನ್ನು ಸಾಗಿಸಿದ್ದು, 3 ಲಕ್ಷ 69 ಸಾವಿರದ 325 ಕುಟುಂಗಳಿಗೆ ಅನುಕೂಲವಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ, ದಿನೇಶ್ ಪೂಜಾರಿ, ಪ್ರಾದೇಶಿಕ ಅಭಿಯಂತರ ಹರೀಶ್‍ನಾಯ್ಕ, ಕ್ಷೇತ್ರ ಯೋಜನಾಧಿಕಾರಿ ಬಿ.ಅಶೋಕ್ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...